Advertisement

Mysuru; ಮಹಿಷ ದಸರಾ ಅರ್ಜಿ ವಿಚಾರಣೆ ಅ. 27 ಕ್ಕೆ ಮುಂದೂಡಿಕೆ

07:34 PM Oct 11, 2023 | Team Udayavani |

ಮೈಸೂರು: ಮಹಿಷ ದಸರಾ ಆಚರಣೆ ವಿರೋಧಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ವಿಚಾರಣೆ ನಡೆಸಿದ ಮೈಸೂರಿನ ಎಂಟನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ, ಅರ್ಜಿ ವಿಚಾರಣೆಯನ್ನು ಅ. 27 ಕ್ಕೆ ಮುಂದೂಡಿದೆ.

Advertisement

ಆಚರಣೆ ವಿರೋಧಿಸಿ ಪತ್ರಕರ್ತ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಧೀಶರು, ಆಚರಣೆ ಸಮಿತಿಯ ಅಧ್ಯಕ್ಷರಾಗಿರುವ ಮಾಜಿ ಮೇಯರ್ ಪುರುಷೋತ್ತಮ್ ಅವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿತ್ತು.
ಕೋರ್ಟ್ ಆದೇಶದಂತೆ ಬುಧವಾರ ವಿಚಾರಣೆಗೆ ಹಾಜರಾದ ಪುರುಷೋತ್ತಮ್ ಅವರು ಕಾಲಾವಕಾಶ ಕೋರಿದ್ದರಿಂದ ನ್ಯಾಯಾಧೀಶರು, ವಿಚಾರಣೆಯನ್ನು ಮುಂದೂಡಿದರು ಎಂದು ಕೋರ್ಟಿನಲ್ಲಿ ಮೊಕದ್ದಮೆ ಹೂಡಿದ್ದ ಸ್ನೇಹಮಯಿ ಕೃಷ್ಣ ಮಾಹಿತಿ ನೀಡಿದರು.

ಈ ಮಧ್ಯೆ ಮಹಿಷ ದಸರಾ ಆಚರಣೆ ಮತ್ತು ಚಲೋ ಚಾಮುಂಡಿ ಬೆಟ್ಟ ಕಾರ್ಯಕ್ರಮಕ್ಕೆ ಮೈಸೂರು ನಗರ ಪೊಲೀಸ್ ಆಯುಕ್ತರು ಅನುಮತಿ ನೀಡಲು ನಿರಾಕರಿಸಿದ್ದಾರೆ.

ಮಹಿಷ ದಸರಾ ಆಚರಣೆಗೆ ಬದ್ದ
ಚಾಮುಂಡಿ ಬೆಟ್ಟದಲ್ಲಿ ಅ. 13 ರಂದು ಮಹಿಷ ದಸರಾ ಆಚರಣೆ ಮಾಡುವ ವಿಚಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಕಾರ್ಯಕ್ರಮ ಮಾಡುತ್ತೇವೆ ಎಂದು ಮಾಜಿ ಮೇಯರ್ ಪುರುಷೋತ್ತಮ್ ಹೇಳಿದರು.

ಆಚರಣೆ ಸಂಬಂಧ ನಾನಾ ಸಂಘಟನೆಗಳೊಂದಿಗೆ ಸಭೆ ನಡೆಸಲಾಗಿದ್ದು, ಕಳೆದ 8 ವರ್ಷಗಳಿಂದ ಶಾಂತಿ ಯುತವಾಗಿ ನಡೆಯುತ್ತಿರುವ ಮಹಿಷ ದಸರಾ ಆಚರಣೆಯಿಂದ ಯಾರಿಗೂ ತೊಂದರೆಯಾಗಿಲ್ಲ. ಧಾರ್ಮಿಕ ಭಾವನೆಗೆ ಧಕ್ಕೆಯಾಗಿಲ್ಲ. ಆದ್ದರಿಂದ ಕಾರ್ಯಕ್ರಮಕ್ಕೆ ಅನುಮತಿ ನೀಡುವಂತೆ ಮತ್ತೆ ನಗರ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಲು ನಿರ್ಧರಿಸಿದ್ದೇವೆ ಎಂದು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next