Advertisement

Mysuru; ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಸೆಸ್ಕ್‌ನ ಇಬ್ಬರು ಅಧಿಕಾರಿಗಳು

08:09 PM Mar 07, 2024 | Team Udayavani |

ಮೈಸೂರು: ವಿದ್ಯುತ್ ಸಂಪರ್ಕ ನೀಡಲು ಲಂಚದ ಬೇಡಿಕೆ ಇಟ್ಟ ಸೆಸ್ಕ್‌ನ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸೆಸ್ಕ್‌ನ ಎಇ ಜಿ.ಹರೀಶ್, ಜೂನಿಯರ್ ಲೈನ್‌ಮನ್ ಗುಂಡಪ್ಪ(29) ಬಲೆಗೆ ಬಿದ್ದವರು.

Advertisement

ಕುವೆಂಪು ನಗರದಲ್ಲಿರುವ ಸೆಸ್ಕ್‌ನ ಉಪ ವಿಭಾಗದ ಕಚೇರಿಯಲ್ಲಿ ಗುರುವಾರ ಸಂಜೆ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಸಿಕ್ಕಿ ಬಿದ್ದಿದ್ದಾರೆ. ಬೆಂಗಳೂರು ಮೂಲದ ಅಭಿಷೇಕ್ ಅವರು ಮೈಸೂರು ನಗರದಲ್ಲಿ ವಿದ್ಯುತ್ ಸಂಪರ್ಕ ಪಡೆಯಲು ಅರ್ಜಿ ಸಲ್ಲಿಸಿದ್ದು, ಈ ವೇಳೆ ಎಇ ಹರೀಶ್ ಅವರು 10 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಅಭಿಷೇಕ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ಗುರುವಾರ ಸಂಜೆ ಕಚೇರಿಯಲ್ಲಿ ಎಇ ಹರೀಶ್ ಪರವಾಗಿ ಮಾತನಾಡಿದ ಲೈನ್‌ಮನ್ ಗುಂಡಪ್ಪ ಲಂಚ ಸ್ವೀಕರಿಸುತ್ತಿದ್ದಾಗ ಕಾರ್ಯಚರಣೆ ನಡೆಸಿ ಇಬ್ಬರನ್ನು ಬಂಧಿಸಲಾಗಿದ್ದು, ಹಣವನ್ನು ವಶಕ್ಕೆ ಪಡೆಯಲಾಗಿದೆ.

ಲೋಕಾಯುಕ್ತ ಎಸ್ಪಿ ವಿ.ಜೆ.ಸಜೀತ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಡಿವೈಎಸ್ಪಿ ವಿ.ಕೃಷ್ಣಯ್ಯ, ಇನ್ಸ್‌ಪೆಕ್ಟರ್‌ಗಳಾದ ಉಮೇಶ್, ಜಯರತ್ನ, ಸಿಬ್ಬಂದಿಗಳಾದ ಗುರುಪ್ರಸಾದ್, ವೀರಭದ್ರ ಸ್ವಾಮಿ, ಕಾಂತರಾಜು,ಆಶಾ, ತ್ರಿವೇಣಿ, ಮೋಹನ, ಪ್ರದೀಪ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next