Advertisement

ಎನ್‌.ಮಹೇಶ್‌ ಮನವೊಲಿಕೆ ಯತ್ನ

06:00 AM Oct 13, 2018 | Team Udayavani |

ಬೆಂಗಳೂರು: ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್‌.ಮಹೇಶ್‌ ರಾಜೀನಾಮೆ ಪತ್ರ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ರಾಜ್ಯಪಾಲರಿಗೆ ಕಳುಹಿಸಿಲ್ಲ. ಮೂಲಗಳ ಪ್ರಕಾರ, ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ ಅವರ ಜತೆ ಕುಮಾರ ಸ್ವಾಮಿ ಮಾತನಾಡಲಿದ್ದಾರೆ. ಜತೆಗೆ ಮಹೇಶ್‌ ಬಳಿಯೂ ಚರ್ಚಿಸಿ ಮನವೊಲಿಸಲಿದ್ದಾರೆ ಎಂದು ಹೇಳಲಾಗಿದೆ. 

Advertisement

ಬಿಎಸ್‌ಪಿ-ಜೆಡಿಎಸ್‌ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿತ್ತು. ನಂತರ ಸಮ್ಮಿಶ್ರ ಸರ್ಕಾರದಲ್ಲಿ ಜೆಡಿಎಸ್‌ ಕೋಟಾದ ಒಂದು ಸಚಿವ ಸ್ಥಾನ ಬಿಎಸ್‌ಪಿಗೆ ನೀಡಲಾಗಿದೆ. ಹೀಗಾಗಿ, ಜೆಡಿಎಸ್‌ ಭಾಗವಾಗಿ ಬಿಎಸ್‌ಪಿ ಸರ್ಕಾರದಲ್ಲಿ ಮುಂದುವರಿಯಬಹುದು ಎಂದು ಮಾಯಾವತಿ ಅವರಿಗೆ ಮನವರಿಕೆ ಮಾಡಿಕೊಡಲು ಮುಂದಾಗಿದ್ದಾರೆ. ದೇವೇಗೌಡರು ಮಾತನಾಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next