Advertisement

ಎನ್‌.ಮಹೇಶ್‌ಗೆ ಅಮಾನತು ಶಿಕ್ಷೆ

12:04 AM Jul 24, 2019 | Team Udayavani |

ಬೆಂಗಳೂರು: ಅತ್ತ ಕುಮಾರಸ್ವಾಮಿ ನೇತೃತ್ವದ ಸರ್ಕಾರವು ವಿಶ್ವಾಸಮತದಲ್ಲಿ ಸೋಲುತ್ತಿದ್ದಂತೆ, ಇತ್ತ ವಿಶ್ವಾಸಮತದ ವೇಳೆ ಗೈರಾಗಿದ್ದ ಬಿಎಸ್‌ಪಿ ಶಾಸಕ ಎನ್‌.ಮಹೇಶ್‌ ಅವರನ್ನು ಪಕ್ಷದಿಂದ ಅಮಾನತು ಮಾಡಿ ಬಿಎಸ್‌ಪಿ ಅಧಿನಾಯಕಿ ಮಾಯಾವತಿ ಆದೇಶ ಹೊರಡಿಸಿದ್ದಾರೆ.

Advertisement

ಶಾಸಕ ಎನ್‌. ಮಹೇಶ್‌ ಅವರು ವಿಶ್ವಾಸಮತ ಯಾಚನೆ ವೇಳೆ ಹಾಜರಾಗಿರಲಿಲ್ಲ ಮತ್ತು ಪಕ್ಷದ ನಿರ್ದೇಶನವನ್ನು ಉಲ್ಲಂಘಿಸುವ ಮೂಲಕ ಅಶಿಸ್ತು ತೋರಿದ್ದಾರೆ. ಪಕ್ಷವು ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ತತ್‌ಕ್ಷಣದಿಂದಲೇ ಅವರನ್ನು ಅಮಾನತು ಮಾಡಿದೆ ಎಂದು ಮಾಯಾವತಿ ಅವರು ಟ್ವೀಟ್‌ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next