Advertisement

ನಾನೊಬ್ಬ ಪಕ್ಷ ನಿಷ್ಠೆಯ ಕಾರ್ಯಕರ್ತ, ನಿಷ್ಠರನ್ನು ಪಕ್ಷ ಗುರುತಿಸುತ್ತದೆ: ರವಿ ಕುಮಾರ್

01:08 PM Aug 02, 2021 | Team Udayavani |

ಬೆಂಗಳೂರು: ನಾನೊಬ್ಬ ಪಕ್ಷ ನಿಷ್ಠೆಯುಳ್ಳ ಕಾರ್ಯಕರ್ತ. ಪಕ್ಷ ನಿಷ್ಠಾವಂತರನ್ನು ಪಕ್ಷ ಗುರುತಿಸುತ್ತದೆ ಎಂದು ಬಿಜೆಪಿ ಎಂಎಲ್ ಸಿ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿ ಕುಮಾರ್ ಹೇಳಿದರು. ಈ ಮೂಲಕ ತಾನೂ ಸಚಿವ ಸ್ಥಾನದ ಆಕಾಂಕ್ಷಿ ಎಂದು ಪರೋಕ್ಷವಾಗಿ ಹೇಳಿದರು.

Advertisement

ರವಿ ಕುಮಾರ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಶಾಂತ ಭೀಷ್ಮ ಚೌಡಯ್ಯ ಮಹಾಸ್ವಾಮಿಗಳು ಬಿಎಸ್‌ವೈ ನಿವಾಸ ಕಾವೇರಿಗೆ ಆಗಮಿಸಿ ಒತ್ತಾಯ ಮಾಡಿದ್ದರು. ಈ ಕುರಿತಾಗಿ ಮಾತನಾಡಿದ ರವಿ ಕುಮಾರ್, ಇವತ್ತು ಸ್ವಾಮೀಜಿಗಳು ಯಡಿಯೂರಪ್ಪ ಭೇಟಿ ಮಾಡಿದ್ದಾರೆ. ಸ್ವಾಮೀಜಿಗಳು ಕೇಳಿರೋದರಲ್ಲಿ ತಪ್ಪೇನಿಲ್ಲ. ಬೇರೆ ಬೇರೆ ಸ್ವಾಮೀಜಿಗಳು ಕೇಳಿದ್ದಾರೆ. ನನಗೆ ಸಚಿವ ಸ್ಥಾನ ಕೊಟ್ಟರೂ ಸಂತೋಷ, ಕೊಡದಿದ್ದರೂ ಸಂತೋಷ ಎಂದರು.

ಇದನ್ನೂ ಓದಿ:ಇಂದೂ ಮುಂದುವರಿಯಲಿದೆ ಸಂಪುಟ ಸರ್ಕಸ್: 15 ಶಾಸಕರಿಗೆ ಮಾತ್ರ ಅವಕಾಶ? ಹಿರಿಯರಿಗೆ ಕೊಕ್?

ನಾನು ಹೋರಾಟದ ಮೂಲಕವೇ ಬಂದವನು. ಸಂಘದಿಂದ ಬಂದವರನ್ನು ಗುರುತಿಸಲಾಗುತ್ತದೆ. ನನಗೆ ಸಚಿವ ಸ್ಥಾನ ಕೊಟ್ಟರೂ ಸರಿ, ಇಲ್ಲವಾದರೂ ನೋವಿಲ್ಲ ಎಂದು ರವಿಕುಮಾರ್ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next