Advertisement

ಕೆಲಗೇರಿ ಹೊಲದಲ್ಲಿ ಇಂದು ಸಂಜೆ ಕವಿ ಕಣವಿ ಅಂತ್ಯಕ್ರಿಯೆ

11:55 AM Feb 16, 2022 | Team Udayavani |

ಧಾರವಾಡ: ನಾಡೋಜ ಡಾ.ಚೆನ್ನವೀರ ಕಣವಿ ಅವರ ಪಾರ್ಥಿವ ಶರೀರದ ಸಾರ್ವಜನಿಕ ಅಂತಿಮ ದರ್ಶನಕ್ಕೆ ಕರ್ನಾಟಕ ಕಾಲೇಜಿನಲ್ಲಿ ಜಿಲ್ಲಾಡಳಿತ ವ್ಯವಸ್ಥೆ ಮಾಡಿದ್ದು, ಇಂದು ಬುಧವಾರ ಸಂಜೆಯೇ ಅಂತ್ಯಕ್ರಿಯೆ ನಡೆಸಲಾಗುತ್ತಿದೆ.

Advertisement

ಎಸ್ ಡಿ ಎಂ ಆಸ್ಪತ್ರೆ ಯಿಂದ ಕವಿ ಕಣವಿ ಅವರ ಪಾರ್ಥಿವ ಶರೀರವನ್ನು ಧಾರವಾಡದ ಕಲ್ಯಾಣ ನಗರದಲ್ಲಿ ಇರುವ ಅವರ ನಿವಾಸಕ್ಕೆ ತರಲಾಗುತ್ತಿದ್ದು, ಅಲ್ಲಿ ಲಿಂಗಾಯತ ಧರ್ಮ ವಿಧಿ ವಿಧಾನದಂತೆ ಪೂಜೆ ಸಲ್ಲಿಸಲು ವ್ಯವಸ್ಥೆ ಮಾಡಲಾಗಿದೆ.

ಅಲ್ಲಿಂದ ಕೆಸಿಡಿ ಕಾಲೇಜ್ ನಲ್ಲಿ ಮಧ್ಯಾನ್ಹ ೧-೩ಗಂಟೆ ವರೆಗೆ ಸಾರ್ವಜನಿಕ ಅಂತಿಮ ದರ್ಶನ ಕ್ಕೆ ವ್ಯವಸ್ಥೆ ಮಾಡಲಾಗಿದ್ದು,ಅಲ್ಲಿಂದ ಕೆಲಗೇರಿ ಬಳಿ ಇರುವ ಕಣವಿ ಅವರ ಹೊಲದಲ್ಲಿಯೇ ಅಂತ್ಯಕ್ರಿಯೆ ನಡೆಸಲು ಅವರ ಕುಟುಂಬ ಸದಸ್ಯರು ನಿರ್ಧರಿಸಿದ್ದಾರೆ.ಅದಕ್ಕಾಗಿ ಸಿದ್ದತೆ ಮಾಡಲಾಗಿದೆ. ಸಕಲ ಸರ್ಕಾರಿ ಪೊಲೀಸ್ ಗೌರವ ಗಳೊಂದಿಗೆ ಕವಿ ಕಣವಿ ಅವರ ಅಂತ್ಯ ಕ್ರಿಯೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ್ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next