Advertisement

ಆಂಧ್ರಪ್ರದೇಶದಲ್ಲಿ ಮೋದಿಗೆ ಕಾದಿದೆ ಪ್ರತಿಭಟನೆಯ ಸ್ವಾಗತ

07:58 AM Feb 10, 2019 | Karthik A |

ಹೈದ್ರಾಬಾದ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆದಿತ್ಯವಾರದಂದು ಆಂಧ್ರಪ್ರದೇಶಕ್ಕೆ ಭೇಟಿ ನೀಡುವ ಕಾರ್ಯಕ್ರಮವಿದೆ. ಈ ಸಂದರ್ಭದಲ್ಲಿ ಪ್ರಧಾನಿಯವರಿಗೆ ಆಂಧ್ರಪ್ರದೇಶದ ಜನತೆಯಿಂದ ಪ್ರತಿಭಟನೆಯ ಬಿಸಿ ಎದುರಾಗಿದೆ. ‘ನೋ ಮೋರ್ ಮೋದಿ’, ‘ಮೋದಿ ಇಸ್ ಎ ಮಿಸ್ಟೇಕ್’, ‘ಮೋದಿ ನೆವರ್ ಅಗೈನ್’ ಮುಂತಾದ ಸ್ಲೋಗನ್ ಗಳನ್ನು ಹಿಡಿದುಕೊಂಡು ಪ್ರತಿಭಟನಾಕಾರರು ಮೋದಿ ವಿರುದ್ಧ ಪ್ರತಿಭಟಿಸುತ್ತಿದ್ದಾರೆ.

Advertisement

ಇತ್ತ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಪ್ರಧಾನಿ ಮೋದಿ ಅವರ ಆಂಧ್ರ ಭೇಟಿಯನ್ನು ‘ಕರಾಳ ದಿನ’ ಎಂದು ಕರೆದಿದ್ದಾರೆ. ಮತ್ತು ಈ ಸಂದರ್ಭದಲ್ಲಿ ತೆಲುಗುದೇಶಂ ಪಕ್ಷದ ಕಾರ್ಯಕರ್ತರು ಗಾಂಧಿ ಮಾದರಿಯ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಿದ್ದಾರೆ ಎಂದು ನಾಯ್ಡು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು. ತೆಲುಗುದೇಶಂ ಪಕ್ಷವು ಎನ್.ಡಿ.ಎ. ಮೈತ್ರಿಕೂಟದಿಂದ ಹೊರಬಿದ್ದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಅವರು ಆಂಧ್ರಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ.

ಆದಿತ್ಯವಾರದಂದು ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ ಅವರು ಅಲ್ಲಿ ‘ಪ್ರಜಾ ಚೈತನ್ಯ ಸಭಾ’ ಹೆಸರಿನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇದೇ ಸಂದರ್ಭದಲ್ಲಿ 1.33 ಎಂ.ಎಂ.ಟಿ. ವಿಶಾಖಪಟ್ಟಣಂ ಸ್ಟ್ರೆಟಜಿಕ್ ಪೆಟ್ರೋಲಿಯಂ ರಿಸರ್ವ್ ಅನ್ನು ರಾಷ್ಟ್ರಕ್ಕೆ ಪ್ರಧಾನಮಂತ್ರಿಯವರು ಸಮರ್ಪಿಸಲಿದ್ದಾರೆ. ಇನ್ನು ಕೃಷ್ಣ-ಗೋದಾವರಿ ತೀರದಲ್ಲಿರುವ ಒ.ಎನ್.ಜಿ.ಸಿ.ಯ ವಶಿಷ್ಠ ಮತ್ತು ಎಸ್.1 ಅಭಿವೃದ್ಧಿ ಯೋಜನೆಗಳಿಗೆ ಸಹ ಇದೇ ಸಂದರ್ಭದಲ್ಲಿ ನರೇಂದ್ರ ಮೋದಿ ಅವರು ಶಿಲಾನ್ಯಾಸವನ್ನು ನೆರವೇರಿಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next