Advertisement

ನಫೆಡ್‌ ಕೊಬ್ಬರಿ ಖರೀದಿ ಕೇಂದ್ರಕ್ಕೆ ಚಾಲನೆ

09:00 AM Aug 11, 2020 | Suhan S |

ಚನ್ನರಾಯಪಟ್ಟಣ: ಕೊಬ್ಬರಿಗೆ ಸೂಕ್ತ ಬೆಲೆ ನಿಗದಿಪಡಿಸುವುದರ ಜತೆಗೆ 5 ಸಾವಿರ ರೂ. ಬೆಂಬಲ ಬೆಲೆ ನೀಡುವ ಮೂಲಕ ರೈತ ಸಮುದಾಯಕ್ಕೆ ನೆರವಾಗಬೇಕೆಂದು ಸರ್ಕಾರವನ್ನು ಶಾಸಕ ಸಿ.ಎನ್‌.ಬಾಲಕೃಷ್ಣ ಒತ್ತಾಯಿಸಿದರು.

Advertisement

ಪಟ್ಟಣದ ಕೃಷಿ ಉತ್ಪನ್ನ ಆವರಣದಲ್ಲಿ ಪ್ರಸಕ್ತ ಸಾಲಿನ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ನಫೆಡ್‌ ಮುಖಾಂತರ ತೆರೆದಿರುವ ಕೊಬ್ಬರಿ ಖರೀದಿ ಕೇಂದ್ರ ಉದ್ಘಾಟಿಸಿ ಮಾತನಾಡಿ, ನಫೆಡ್‌ ಮೂಲಕ ಹೆಚ್ಚಿನ ಬೆಲೆಗೆ ಕೊಬ್ಬರಿ ಖರೀದಿ ಮಾಡುವುದರಿಂದ ರೈತರು ದಲ್ಲಾಳಿಗಳೊಂದಿಗೆ ವ್ಯವಹರಿಸುವುದು ಕಡಿಮೆಯಾಗುತ್ತದೆ, ಇನ್ನು ತೆಂಗು ಬೆಳೆಗಾರರಿಗೆ ವಾರ್ಷಿಕ ಸಹಾಯ ಧನ ನೀಡುವ ಮೂಲಕ ಕೃಷಿಕರಿಗೆ ಉತ್ತೇಜನ ನೀಡಬೇಕು ಎಂದರು.

ಕಳೆದ ಎರೆಡು ವರ್ಷದ ಹಿಂದೆ ಕ್ವಿಂಟಲ್‌ ಕೊಬ್ಬರಿಗೆ 16 ರಿಂದ 17 ಸಾವಿರ ರೂ. ವರೆಗೆ ರೈತರು ಕೊಬ್ಬರಿ ಮಾರಾಟ ಮಾಡಿದ್ದಾರೆ, ಪ್ರಸಕ್ತ ವರ್ಷದಲ್ಲಿ ಕೊಬ್ಬರಿ ಬೆಲೆ ತೀವ್ರ ಕುಸಿದಿದ್ದು ತೆಂಗು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ, ಈ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರವು ಹೆಚ್ಚಿನ ಆದ್ಯತೆ ನೀಡುವ ಮೂಲಕ ತೆಂಗು ಬೆಳೆಗಾರರ ನೆರವಿಗೆ ನಿಲ್ಲಬೇಕು ಎಂದು ಆಗ್ರಹಿಸಿದರು. ಕ್ವಿಂಟಲ್‌ ಕೊಬ್ಬರಿಗೆ 10,300 ರೂ. ನಿಗದಿಯಾಗಿದ್ದು ಈಗಾಗಲೆ 226ಕ್ಕೂ ಹೆಚ್ಚು ರೈತರು ಪಹಣಿ ಹಾಗೂ ಇತರೆ ಅಗತ್ಯ ದಾಖಲಾತಿಯನ್ನು ನೀಡಿ ನೋಂದಣಿ ಮಾಡಿಕೊಂಡಿದ್ದಾರೆ, ಇನ್ನು ಸಾವಿರಕ್ಕೂ ಹೆಚ್ಚು ಮಂದಿ ರೈತರು ನಫೆಡ್‌ ಮೂಲಕ ಕೊಬ್ಬರಿ ಮಾರಾಟ ಮಾಡಲು ಮುಂದಾಗುತ್ತಾರೆ ಈ ಬಗ್ಗೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಿಬ್ಬಂದಿ ಹೆಚ್ಚು ಪ್ರಚಾರ ಮಾಡಬೇಕಾಗಿದೆ ಎಂದು ಹೇಳಿದರು.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಶಿವಸ್ವಾಮಿ, ಉಪಾಧ್ಯಕ್ಷ ಮುನಿಯಪ್ಪ, ಅಧಿಕಾರಿ ಚೇತನ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next