Advertisement

Nagamangala Riots: ಕದ್ರಿ: ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ ಪ್ರತಿಭಟನೆ

01:35 AM Sep 13, 2024 | Team Udayavani |

ಮಂಗಳೂರು: ನಾಗಮಂಗಲ ಘಟನೆಯ ಆರೋಪಿ ಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಗಳ ಒಕ್ಕೂಟ ಮಂಗಳೂರು ಇದರ ನೇತೃತ್ವದಲ್ಲಿ ಗುರುವಾರ ಕದ್ರಿ ಮಲ್ಲಿಕಟ್ಟೆ ವೃತ್ತದ ಬಳಿ ಪ್ರತಿಭಟನೆ ನಡೆಯಿತು.

Advertisement

ವಿಹಿಂಪ ಪ್ರಾಂತ ಸಹಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌ ಮಾತನಾಡಿ, ಗಣಪತಿ ವಿಸರ್ಜನೆ ವೇಳೆ ನಡೆದ ಘಟನೆ ಹಿಂದೂಗಳ ಧಾರ್ಮಿಕ ಭಾವನೆಯನ್ನು ಘಾಸಿಗೊಳಿಸಿದೆ. ನಾಗಮಂಗಲದ ಘಟನೆಯ ಹಿಂದೆ ನಿಷೇಧಿತ ಪಿಎಫ್‌ಐ ಸಂಘಟನೆಯ ಕೈವಾಡವಿರುವ ಶಂಕೆಯಿದೆ. ಆದ್ದರಿಂದ ಘಟನೆ ಬಗ್ಗೆ ಸರಿಯಾದ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

ವಿಹಿಂಪ ಪ್ರಾಂತ ಕಾರ್ಯಾಧ್ಯಕ್ಷ ಪ್ರೊ| ಎಂ.ಬಿ.ಪುರಾಣಿಕ್‌ ಮಾತನಾಡಿ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಸ್ತ ಸಮಾಜವನ್ನು ಒಗ್ಗೂಡಿಸುತ್ತದೆ. ಆದರೆ ಇಂತಹ ಕಾರ್ಯಕ್ರಮದಲ್ಲಿ ದಾಂಧಲೆ ನಡೆದಿರುವುದು ಖಂಡನೀಯ ಎಂದರು.

ವಿಹಿಂಪ ದ.ಕ. ಜಿಲ್ಲಾಧ್ಯಕ್ಷ ಎಚ್‌.ಕೆ.ಪುರುಷೋತ್ತಮ, ವಿಹಿಂಪ – ಬಜರಂಗದಳ ಮುಖಂಡರಾದ ಭುಜಂಗ ಕುಲಾಲ್‌, ಶಿವಾನಂದ ಮೆಂಡನ್‌, ಪುನೀತ್‌ ಅತ್ತಾವರ, ಮನೋಹರ ಸುವರ್ಣ, ಸಂಘನಿಕೇತನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಉಪಾಧ್ಯಕ್ಷ ಸತೀಶ್‌ ಪ್ರಭು, ಮಹಾನಗರ ಪಾಲಿಕೆ ಸದಸ್ಯರಾದ ಕಿರಣ್‌ ಕೋಡಿಕಲ್‌, ಶಕೀಲಾ ಕಾವ, ಸುಧಾಕರ ರಾವ್‌ ಪೇಜಾವರ ಸಹಿತ ಹಲವಾರು ಪ್ರಮುಖರು ಪಾಲ್ಗೊಂಡಿದ್ದರು.

ನಾಗಮಂಗಲ ಪ್ರಕರಣ: ದ.ಕ.ಜಿಲ್ಲಾ ಬಿಜೆಪಿ ಖಂಡನೆ
ಮಂಗಳೂರು: ನಾಗಮಂಗಲದಲ್ಲಿ ಗಣೇಶೋತ್ಸವದ ಮೆರವಣಿಗೆ ಮೇಲೆ ಅನ್ಯಮತೀಯ ಮತಾಂಧ ಶಕ್ತಿಗಳು ಕಲ್ಲು ತೂರಾಟ ಮಾಡುವುದರ ಮೂಲಕ ದುಷ್ಕೃತ್ಯ ಮೆರೆದಿದ್ದಾರೆ. ಇಂತಹ ಪ್ರಕರಣಗಳು ಪದೇಪದೇ ಮರುಕಳಿಸಲು ಕಾಂಗ್ರೆಸ್‌ ಸರಕಾರ ಕ್ರಿಮಿನಲ್‌ಗ‌ಳ ಬಗ್ಗೆ ತೋರುತ್ತಿರುವ ಮೃದು ಧೋರಣೆಯೇ ಪ್ರಮುಖ ಕಾರಣ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿ.ಜೆ.ಪಿ. ಅಧ್ಯಕ್ಷ ಸತೀಶ್‌ ಕುಂಪಲ ಆರೋಪಿಸಿದ್ದಾರೆ.

Advertisement

ಘಟನೆಯನ್ನು ಖಂಡಿಸಿರುವ ಅವರು, ಕಟ್ಟಡಗಳ ಒಳಗಿನಿಂದ ಹಿಂದೂಗಳನ್ನು ಗುರಿಯಾಗಿಸಿ ಕಲ್ಲು ತೂರಿರುವುದು ಪೂರ್ವಯೋಜಿತ ಕೃತ್ಯ ಎಂದು ಸಾಬೀತಾಗಿದೆ. ಕಾಂಗ್ರೆಸ್‌ ಸರಕಾರ ಬಂದ ಕರ್ಮಕ್ಕೆ ಹಿಂದೂಗಳು ಯಾತನೆ ಅನುಭವಿಸುತ್ತಿದ್ದಾರೆ ಎಂದಿದ್ದಾರೆ. ಪೊಲೀಸರು ಗಲಭೆ ನಡೆಸಿದ ಕಿಡಿಗೇಡಿಗಳನ್ನು ಬಂಧಿಸುವ ಬದಲು ಸ್ಥಳೀಯ ಹಿಂದೂಗಳ ಮನೆಗಳಿಗೆ ನುಗ್ಗಿ ಅಮಾಯಕ ಯುವಕರನ್ನು ಠಾಣೆಗೆ ಕರೆದೊಯ್ಯುವ ಮೂಲಕ ಗಾಯದ ಮೇಲೆ ಬರೆ ಎಳೆದಂತೆ ಕಾಂಗ್ರೆಸ್‌ ಸರಕಾರ ನಡೆದುಕೊಳ್ಳುತ್ತಿದೆ. ತಪ್ಪಿತಸ್ಥರಿಗೆ ಕಠಿನ ಶಿಕ್ಷೆಯಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಮಡಿಕೇರಿಯಲ್ಲೂ ಪ್ರತಿಭಟನೆ
ಮಡಿಕೇರಿ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿ ನಲ್ಲಿ ಗಣೇಶ ಮೂರ್ತಿಯ ಮೆರವಣಿಗೆ ಸಂದರ್ಭ ನಡೆದ ಅಹಿತಕರ ಘಟನೆಗಳನ್ನು ಖಂಡಿಸಿ ಹಿಂದೂ ಸಂಘಟನೆಗಳು ಮಡಿಕೇರಿ ಯಲ್ಲಿ ಪ್ರತಿಭಟನೆ ನಡೆಸಿದವು.

ನಗರದ ಜನರಲ್‌ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಗಳ ಪ್ರಮುಖರು ಹಾಗೂ ಕಾರ್ಯಕರ್ತರು ಗಲಭೆ ನಡೆಸಿ ಮೆರವಣಿಗೆಗೆ ತಡೆಯೊಡ್ಡಿದ ತಪ್ಪಿತಸ್ಥರ ವಿರುದ್ಧ ಕಠಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಹಿಂದೂ ಸಂಘಟನೆಗಳ ಪ್ರಮುಖರು, ಬಿಜೆಪಿ ನಾಯಕರು, ಕಾರ್ಯಕರ್ತರು ಹಾಗೂ ವಿವಿಧ ಗಣೇಶೋತ್ಸವ ಸಮಿತಿಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next