Advertisement

ತಂಗಡಗಿಗೆ ಸೆಡ್ಡು: ಮಾಜಿ ಸಚಿವ ನಾಗಪ್ಪ ಸಾಲೋಣಿ ಬಿಜೆಪಿಗೆ 

02:31 PM Apr 03, 2018 | Team Udayavani |

ಕನಕಗಿರಿ: ಪಕ್ಷಾಂತರ ಪರ್ವ ಮುಂದುವರಿದಿದ್ದು, ಮಾಜಿ ಸಚಿವ, ಕುರುಬ ಸಮುದಾಯದ ಪ್ರಭಾವಿ ನಾಯಕ ನಾಗಪ್ಪ ಸಾಲೋಣಿ ಅವರು ತನ್ನ ಅಪಾರ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆಯಾಗುವುದು ಖಚಿತವಾಗಿದೆ. 

Advertisement

ಕಳೆದ ಚುನಾವಣೆಯಲ್ಲಿ  ಮಾಜಿ ಸಚಿವ ಶಿವರಾಜ್‌ ತಂಗಡಗಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಸಾಲೋಣಿ ಅವರು ಕಾಂಗ್ರೆಸ್‌ನಲ್ಲಿರುವ ಗುಂಪುಗಾರಿಕೆಯಿಂದ ಬೇಸತ್ತು ಯಾವುದೇ ಬೇಡಿಕೆಗಳಿಲ್ಲದೆ ಬಿಜೆಪಿಗೆ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ. 

ಸಾಲೋಣಿ ಅವರನ್ನು ಬಿಜೆಪಿಗೆ ಕರೆತರುವಲ್ಲಿ ಸಂಸದ ಸಂಗಣ್ಣ ಕರಡಿ ಅವರು ಮಾತುಕತೆ ನಡೆಸಿದ್ದಾರೆ. 

ಎಪ್ರಿಲ್‌ 5 ರಂದು ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಸಾಲೋಣಿ ಸೇರಿದಂತೆ ಕನಕಗಿರಿಯ ಹಲವು ಕಾಂಗ್ರೆಸ್‌ ಮುಖಂಡರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. 

ಮಾಜಿ ಸಚಿವ ತಂಗಡಗಿಗೆ ಈ ಬೆಳವಣಿಗೆ ಆಘಾತಕಾರಿಯಾಗಿದ್ದು, ಭಾರೀ ಪೈಪೋಟಿ ಎದುರಾಗುವ ಸಾಧ್ಯತೆಗಳಿವೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next