Advertisement

Lok Sabha Poll: ಚಿಕ್ಕಬಳ್ಳಾಪುರಕ್ಕೆ ನಾರ್ವೇಕರ್ ಕಾಂಗ್ರೆಸ್ ಉಸ್ತುವಾರಿ: ಆದೇಶ

03:50 PM Jan 15, 2024 | Team Udayavani |

ಶಿರಸಿ: ಮುಂಬರುವ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಶಿರಸಿಯ ಕಾಂಗ್ರೆಸ್ ಪ್ರಮುಖ, ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷರೂ ಆಗಿದ್ದ, ಎಐಸಿಸಿ ಹಿಂದುಳಿದ ವಿಭಾಗದ ರಾಷ್ಟ್ರೀಯ ಸಂಯೋಜಕ ನಾಗರಾಜ್ ನಾರ್ವೇಕರ್ ಅವರನ್ನು ಚಿಕ್ಕಬಳ್ಳಾಪುರದ ಜಿಲ್ಲಾ ಲೋಕಸಭಾ ಚುನಾವಣಾ ಉಸ್ತುವಾರಿಗಳಾಗಿ ನೇಮಕಗೊಳಿಸಿ ಆದೇಶ ಮಾಡಲಾಗಿದೆ.

Advertisement

ಅಖಿಲ ಭಾರತ ಕಾಂಗ್ರೆಸ್ ಸಮಿತಿ ಹಿಂದುಳಿದ ವಿಭಾಗದ ರಾಷ್ಟ್ರೀಯ ಅಧ್ಯಕ್ಷ ಕ್ಯಾಪ್ಟನ್ ಅಜಯ ಸಿಂಘ್ ಯಾದವ್ ಈ ಆದೇಶ ಮಾಡಿದ್ದು, ಬರಲಿರುವ ಚುನಾವಣೆಯಲ್ಲಿ ಭೂತ್ ಮಟ್ಟದಲ್ಲೇ ಹಿಂದುಳಿದ ವರ್ಗಗಳ ಮತಗಳನ್ನು ಕಾಂಗ್ರೆಸ್ ಕಡೆಗೆ ಸೆಳೆಯುವ ನಿಟ್ಟಿನಲ್ಲಿ ಅನುಭವಿ ಯುವ ತಂಡವನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಲು ಆಶಿಸಿದ್ದೇವೆ ಎಂದೂ ಆದೇಶದಲ್ಲಿ ವಿವರಿಸಿದ್ದಾರೆ. ನಾರ್ವೇಕರ್ ಅವರಿಗೆ ನೀಡಲಾದ ನೂತನ ಜವಬ್ದಾರಿ ಕುರಿತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರಿಗೆ ಪತ್ರ ಬರೆದು ಕೂಡ ತಿಳಿಸಿದ್ದಾರೆ.

ಇದನ್ನೂ ಓದಿ: Bellary; ನಮ್ಮೆಲ್ಲಾ ನಾಯಕರು ರಾಮ ದೇವರೆಂದು ಒಪ್ಪಿಕೊಂಡಿದ್ದಾರೆ: ಸಚಿವ ನಾಗೇಂದ್ರ

Advertisement

Udayavani is now on Telegram. Click here to join our channel and stay updated with the latest news.

Next