Advertisement

ನಾಗಠಾಣ ಬಿಜೆಪಿ ಬಂಡಾಯ ಶಮನ: ನಾಮಪತ್ರ ಹಿಂಪಡೆಯುವುದಾಗಿ ಮಹೇಂದ್ರ ನಾಯಿಕ್ ಘೋಷಣೆ

10:53 AM Apr 24, 2023 | keerthan |

ವಿಜಯಪುರ: ಪರಿಶಿಷ್ಟ ಜಾತಿಗೆ ಮೀಸಲಾಗಿರುವ ನಾಗಠಾಣ ವಿಧಾನಸಭೆ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಬಯಸಿ ನಾಮಪತ್ರ ಸಲ್ಲಿಸಿದ್ದೆ. ಆದರೆ ಇಬ್ಬರು ನಾಯಕರ ಕುತಂತ್ರದಿಂದ ನನಗೆ ಟಿಕೆಟ್ ಕೈತಪ್ಪಿದೆ. ಇದೀಗ ಪಕ್ಷದ ವರಿಷ್ಠರು ಸೂಚನೆ ನೀಡಿದ್ದು, ನಾಮಪತ್ರ ಹಿಂಪಡೆಯುತ್ತಿದ್ದೇನೆ ಎಂದು ಬಿಜೆಪಿ ಬಂಡಾಯ ಸ್ಪರ್ಧಿ ಮಹೇಂದ್ರ ನಾಯಿಕ ಹೇಳಿದರು.

Advertisement

ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪೊಲೀಸ್ ಅಧಿಕಾರಿಯಾಗಿದ್ದ ನಾನು ನಾಗಠಾಣ ಮೀಸಲು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಕನಸಿನೊಂದಿಗೆ ಸರ್ಕಾರಿ ಹುದ್ದೆಗೆ ರಾಜೀನಾಮೆ ನೀಡಿದ್ದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಂದಲೇ ಪಕ್ಷದ ಸದಸ್ಯತ್ವ ಪಡೆದಿದ್ದೆ. ಟಿಕೆಟ್ ಸಿಗದ ಕಾರಣ ಸಹಜವಾಗಿಯೇ ನೋವಾಗಿದೆ. ಸರ್ಕಾರಿ ಹುದ್ದೆ ತೊರೆದು ಬಂದುದಕ್ಕೆ ಪಶ್ಚತ್ತಾಪವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಪಕ್ಷದ ವರಿಷ್ಠರು ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದ ನನಗೆ ಸ್ಪರ್ಧೆಗೆ ಸೂಚಿಸಿದ್ದರು. ಆದರೆ ಇಬ್ಬರು ನಾಯಕರು ಮಾಡಿದ ಕುತಂತ್ರದಿಂದ ನನಗೆ ಟಿಕೆಟ್ ತಪ್ಪಿದೆ. ಪಕ್ಷದಿಂದ ನನಗೆ ಅನ್ಯಾಯವಾಗಿಲ್ಲ. ಹೀಗಾಗಿ ಪಕ್ಷದ ಮುಖಂಡರ ಸೂಚನೆ ಮೇರೆಗೆ ನಾಮಪತ್ರ ಹಿಂಪಡೆದು, ಸ್ಪರ್ಧೆಯಿಂದ ಹಿಂದೆ ಸರಿದು, ನಾಮಪತ್ರ ಹಿಂಪಡೆಯುವುದಾಗಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next