Advertisement

ನಾಯ್ಡು ತಿರುಗಾಟದಿಂದ ಏನೂ ಆಗಲ್ಲ: ಡಿವಿಎಸ್‌

01:04 AM May 23, 2019 | Team Udayavani |

ಬೆಂಗಳೂರು: ‘ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ತಿರುಗಾಟ ಬಿಟ್ಟು ಬೇರೇನೂ ಮಾಡಲು ಸಾಧ್ಯವಿಲ್ಲ’ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದರು.

Advertisement

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಅವರು, ಚಂದ್ರಬಾಬು ನಾಯ್ಡು ಅವರಿಗೆ ಬೇರೆ ಕೆಲಸ ಮಾಡುವುದಕ್ಕೆ ಸಾಧ್ಯವಿಲ್ಲ. ಹೀಗಾಗಿ ಅವರು ತಿರುಗುತ್ತಿದ್ದಾರೆ ಎಂದರು. ಕುಮಾರಸ್ವಾಮಿ ಅವರು ಗುರುವಾರ ಸಂಜೆವರೆಗೆ ಮಾತ್ರ ಮುಖ್ಯಮಂತ್ರಿಯಾಗಿರುತ್ತಾರೆ. ಶುಕ್ರವಾರದ ನಂತರ ಹೊಸ ಸರ್ಕಾರ ರಚನೆಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ರೋಷನ್‌ ಬೇಗ್‌ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸತ್ಯವನ್ನು ಬಹಳ ಕಾಲ ಮುಚ್ಚಿಡಲು ಸಾಧ್ಯವಿಲ್ಲ. ಅಲ್ಲಿ ಇರುವವರಿಗೂ ಸಹಿಸಿಕೊಂಡು ಸಾಕಾಗಿದೆ. ಸಿದ್ದರಾಮಯ್ಯ ರಾಜ ್ಯಕಂಡ ಅತ್ಯಂತ ದುರಹಂಕಾರಿ ಮಾಜಿ ಸಿಎಂ ಎಂದು ಕಾಲೆಳೆದರು.

Advertisement

Udayavani is now on Telegram. Click here to join our channel and stay updated with the latest news.

Next