Advertisement

2030ರೊಳಗೆ ಎಲ್ಲ ಮನೆಗಳಿಗೆ ಕುಡಿವ ನೀರಿನ ನಳ ಸಂಪರ್ಕ

03:45 AM Feb 20, 2017 | Harsha Rao |

ರಾಯಚೂರು: ಕೇಂದ್ರ ಸರ್ಕಾರ ಹರ್‌ ಘರ್‌ ಜಲ್‌ ಯೋಜನೆ ಜಾರಿಗೆ ಚಿಂತನೆ ನಡೆಸಿದ್ದು, 2030ರೊಳಗೆ ದೇಶದ ಎಲ್ಲ
ಮನೆಗಳಿಗೆ ಕುಡಿವ ನೀರಿನ ನಳಗಳ ಸಂಪರ್ಕ ಕಲ್ಪಿಸಲಾಗುವುದು ಎಂದು ಕೇಂದ್ರದ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆ ರಾಜ್ಯ ಸಚಿವ ರಮೇಶ ಜಿಗಜಿಣಗಿ ತಿಳಿಸಿದರು.

Advertisement

ಭಾನುವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿ, ಐದು ಲಕ್ಷ ಕೋಟಿ ರೂ. ವೆಚ್ಚದ ಯೋಜನೆ ಇದಾಗಿದ್ದು, ಈ ಕುರಿತು ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಗಿದೆ. ರಾಷ್ಟ್ರೀಯ ಗ್ರಾಮೀಣ ಕುಡಿವ ನೀರು ಸರಬರಾಜು ಯೋಜನೆಯಡಿ ದೇಶದ ಶೇ.76ರಷ್ಟು ಹಳ್ಳಿಗಳಿಗೆ ಕುಡಿವ ನೀರು ಪೂರೈಸಲಾಗಿದೆ. ಶೇ. 19 ರಷ್ಟು ಹಳ್ಳಿಗಳಿಗೆ ಭಾಗಶಃ ಪೂರೈಕೆ ಆಗುತ್ತಿದೆ. ಶೇ. 4.1 ರಷ್ಟು ಹಳ್ಳಿಗಳ ನೀರಿನಲ್ಲಿ ದೋಷವಿದ್ದು, ಪರ್ಯಾಯ ಕ್ರಮ ಕೈಗೊಳ್ಳಲಾಗುವುದು. ಕುಡಿವ ನೀರಿನ
ಯೋಜನೆಗಳಿಗೆ ಕಳೆದ ಸಾಲಿನಲ್ಲಿ 4,273 ಕೋಟಿ ರೂ. ಬಿಡುಗಡೆ ಮಾಡಿದ್ದು, 2,578 ಕೋಟಿ ರೂ. ಖರ್ಚಾಗಿದೆ
ಎಂದು ತಿಳಿಸಿದರು.

ದೇಶದಲ್ಲಿ 2022ರ ವೇಳೆಗೆ ಶೇ. 90ರಷ್ಟು ಗ್ರಾಮೀಣ ಭಾಗಕ್ಕೆ ಪೈಪ್‌ ಲೈನ್‌ ಮೂಲಕ ನೀರು ಸರಬರಾಜು ಮಾಡ
ಲಾಗುವುದು. ಶೇ. 80ರಷ್ಟು ಮನೆಗಳಿಗೆ ನಳ ಸಂಪರ್ಕ ಕಲ್ಪಿಸುವ ಗುರಿ ಇದೆ. ಕುಡಿಯುವ ನೀರಿನ ಯೋಜನೆಗಳಿಗೆ
ಸಂಬಂಧಪಟ್ಟಂತೆ ರಾಜ್ಯ ಸರ್ಕಾರ 42 ಸಾವಿರ ಕೋಟಿ ರೂ. ಯೋಜನೆ ರೂಪಿಸಿರುವುದಾಗಿ ಮುಖ್ಯಮಂತ್ರಿ
ಪ್ರಸ್ತಾಪಿಸಿದ್ದಾರೆ. ಈ ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಿ ಅಗತ್ಯ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ವಿವರಿಸಿದರು. 2019ರ ಅ.2ರಂದು ಬಯಲು ಶೌಚ ಮುಕ್ತ ಭಾರತ ಘೋಷಣೆಗೆ ಪ್ರಧಾನಿ ನರೇಂದ್ರ ಮೋದಿ ಚಿಂತನೆ ನಡೆಸಿದ್ದಾರೆ ಎಂದು ಸಚಿವ ಜಿಗಜಿಣಗಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next