Advertisement

ನಲಪಾಡ್‌ ಮೆಕ್ಕಾ ಯಾತ್ರೆ ಅರ್ಜಿ ವಿಚಾರಣೆ ಮುಂದಕ್ಕೆ

12:56 AM May 11, 2019 | Lakshmi GovindaRaj |

ಬೆಂಗಳೂರು: ಮೆಕ್ಕಾ ಯಾತ್ರೆಗೆ ತೆರಳಲು ಜಾಮೀನು ಷರತ್ತುಗಳನ್ನು ಸಡಿಲಗೊಳಿಸಬೇಕು ಎಂದು ಕೋರಿ ಉದ್ಯಮಿಯೊಬ್ಬರ ಪುತ್ರನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣದಲ್ಲಿ ಜಾಮೀನು ಪಡೆದಿರುವ ಶಾಸಕ ಎನ್‌.ಎ.ಹ್ಯಾರಿಸ್‌ ಪುತ್ರ ಮೊಹಮ್ಮದ್‌ ನಲಪಾಡ್‌ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಮತ್ತೆ ಮುಂದೂಡಿದೆ.

Advertisement

ಅರ್ಜಿಯು ಶುಕ್ರವಾರ ನ್ಯಾ.ಕೆ.ನಟರಾಜನ್‌ ಅವರಿದ್ದ ರಜಾ ಕಾಲದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಈ ವೇಳೆ ಅರ್ಜಿದಾರರ ಪರ ವಕೀಲರು, ತಮ್ಮ ಕಕ್ಷಿದಾರರಿಗೆ ಮೆಕ್ಕಾ ಯಾತ್ರೆಗೆ ತೆರಳಲು 20 ದಿನಗಳ ಮಟ್ಟಿಗೆ ಜಾಮೀನು ಷರತ್ತುಗಳನ್ನು ಸಡಿಲಿಸಬೇಕು.

ನ್ಯಾಯಾಲಯ ಜಾಮೀನು ಷರತ್ತುಗಳನ್ನು ಸಡಿಲಿಸಿದರೆ ತಮ್ಮದೇನು ಅಭ್ಯಂತರವಿಲ್ಲ ಎಂದು ಈ ಹಿಂದಿನ ವಿಚಾರಣೆ ವೇಳೆ ಪ್ರಕರಣದಲ್ಲಿ ವಿಶೇಷ ಎಸ್‌ಪಿಪಿ ಆಗಿರುವ ಶ್ಯಾಮ್‌ ಸುಂದರ್‌ ಹೇಳಿದ್ದಾರೆ ಎಂದರು. ಆಗ, ಎಸ್‌ಪಿಪಿಯವರು ನ್ಯಾಯಪೀಠದ ಮುಂದೆ ಅಧಿಕೃತವಾಗಿ ಈ ಹೇಳಿಕೆ ನೀಡಿದರು. ಆಮೇಲೆ ನಿಮ್ಮ ಮನವಿ ಪರಿಗಣಿಸಲಾಗುವುದು ಎಂದು ತಿಳಿಸಿದ ನ್ಯಾಯಪೀಠ, ವಿಚಾರಣೆಯನ್ನು ಮೇ 14ಕ್ಕೆ ಮುಂದೂಡಿತು.

ಪ್ರಕರಣ ಸಂಬಂಧ ನಲಪಾಡ್‌ಗೆ ಹೈಕೋರ್ಟ್‌ ಈ ಹಿಂದೆ ಜಾಮೀನು ಮಂಜೂರು ಮಾಡಿತ್ತು. ಆ ವೇಳೆ ವಿಚಾರಣಾ ನ್ಯಾಯಾಲಯದ ಪೂರ್ವಾನುಮತಿ ಪಡೆಯದೇ ಆ ನ್ಯಾಯಾಲಯದ ವ್ಯಾಪ್ತಿ ಬಿಟ್ಟು ಹೊರ ಹೋಗುವಂತಿಲ್ಲ ಎಂದು ಷರತ್ತು ವಿಧಿಸಿತ್ತು. ಇದೀಗ ಮೆಕ್ಕಾಯಾತ್ರೆಗೆ ತೆರಳಬೇಕಿರುವ ಹಿನ್ನೆಲೆಯಲ್ಲಿ ಜಾಮೀನು ಷರತ್ತು ಸಡಿಲಿಸುವಂತೆ ಕೋರಿ ನಲಪಾಡ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next