Advertisement

ಇಷ್ಟು ದಿನ ಎಲ್ಲಿದ್ದರು: ರಮ್ಯಾ ವಿರುದ್ಧ ಕಿಡಿ ಕಾರಿದ ನಲಪಾಡ್

07:47 PM May 12, 2022 | Team Udayavani |

ಉಡುಪಿ : ಇಷ್ಟು ವರ್ಷ ಎಲ್ಲೂ ಇಲ್ಲದ ರಮ್ಯಾ ಏಕಾಏಕಿ ಯಾಕೆ ಬಂದರು, ಅವರು ಇಷ್ಟು ದಿನ ಎಲ್ಲಿದ್ದರೂ ಅಂತ ನನಗೂ ಗೊತ್ತಿಲ್ಲ ಎಂದು ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹ್ಯಾರಿಸ್ ಹೇಳಿಕೆ ನೀಡಿದ್ದಾರೆ.

Advertisement

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ”ಡಿ.ಕೆ.ಶಿವಕುಮಾರ್ ಅವರನ್ನೇ ಪ್ರಶ್ನಿಸಿ ಟ್ವೀಟ್ ಮಾಡಿರುವ ಕುರಿತು ಮಾಜಿ ಕಾಂಗ್ರೆಸ್ ಸಂಸದೆ ರಮ್ಯಾ ವಿರುದ್ಧ ಕಿಡಿ ಕಾರಿ, ರಮ್ಯಾ ತನ್ನ ಅಸ್ತಿತ್ವ ತೋರಿಸಲು ಬಂದಿದ್ದಾರಾ? ನಾನು ಒಬ್ಬಳು ಇದ್ದೇನೆ ಅಂತ ತೋರಿಸಿಕೊಳ್ಳುತ್ತಿದ್ದಾರಾ. ರಮ್ಯಾ ಬಂದದ್ದು ಯಾಕೆ? ಹೀಗೆಲ್ಲ ಮಾಡುತ್ತಿರುವುದು ಯಾವುದಕ್ಕೆ ಅಂತ ನಾವು ಅರ್ಥಮಾಡಿಕೊಳ್ಳಬೇಕು” ಎಂದರು.

”ಡಿ. ಕೆ. ಶಿವಕುಮಾರ್ ಅವರು ಇಂದು ಸ್ಪಷ್ಟಪಡಿಸಿದ್ದಾರೆ, ಎಂ.ಬಿ. ಪಾಟೀಲ್ ಮತ್ತು ಅಶ್ವತ್ ನಾರಾಯಣ್ ಭೇಟಿ ಬಗ್ಗೆ ಮಾಧ್ಯಮದವರು ಪ್ರಶ್ನೆ ಮಾಡಿದ್ದಾರೆ, ಹೌದಪ್ಪ.. ಬಂದಿರಬಹುದು ರಕ್ಷಣೆಗೋಸ್ಕರ ಎಂದು ಹೇಳಿದ್ದಾರೆ, ಎಂ. ಬಿ. ಪಾಟೀಲ್ ಹೋಗಿದ್ದಾರೆ ಎಂದು ಎಲ್ಲೂ ಡಿ. ಕೆ. ಶಿವಕುಮಾರ್ ಅವರು ಹೇಳಿಲ್ಲ” ಎಂದರು.

ಇದನ್ನೂ ಓದಿ:  ರಮ್ಯಾ, ಎಂ.ಬಿ.ಪಾಟೀಲ್ ಇಬ್ಬರೂ ನಮಗೆ ಬೇಕಾದವರು: ಡಿ.ಕೆ. ಶಿವಕುಮಾರ್

”ಕಾಂಗ್ರೆಸ್‌ ಪಕ್ಷದ ಎಲ್ಲಾ ನಾಯಕರು ಒಗ್ಗಟ್ಟಾಗಿದ್ದಾರೆ. ಡಿಕೆಶಿ, ಎಂಬಿ ಪಾಟೀಲ್, ಸಿದ್ದರಾಮಯ್ಯ ನಾವೆಲ್ಲ ಜತೆಗಿದ್ದೇವೆ. ಸುಮ್ಮನೆ ಡಿಸ್ಟರ್ಬೆನ್ಸ್ ಕ್ರಿಯೇಟ್ ಮಾಡಲು ಪ್ರಯತ್ನಿಸುತ್ತಿದ್ದಾರೆ. ರಮ್ಯಾ ಗಮನ ಸೆಳೆಯಲು, ನಾನು ಇನ್ನೂ ಇದ್ದೇನೆ ಎಂದು ತೋರಿಸಿ ಕೊಳ್ಳುತ್ತಿರಬಹುದು. ನನಗೂ ಒಂದು ಕುರ್ಚಿ ಕೊಡಿ ಎಂದು ಟವಲ್ ಹಾಕುತ್ತಿರಬಹುದು. ಈ ವಿಚಾರಕ್ಕೂ ರಮ್ಯಾಗೂ ಏನು ಸಂಬಂಧ” ಎಂದು ಪ್ರಶ್ನಿಸಿದರು.

Advertisement

”ರಮ್ಯಾ ಅವರ ಹಳೆಯ ಟ್ವೀಟ್ ಗಳನ್ನು ತೆಗೆದುಕೊಂಡು ನೋಡಿ, ಯಾವುದೋ ಸಿನಿಮಾಗಳ ಬಗ್ಗೆ ಮಾತ್ರ ಟ್ವೀಟ್ ಮಾಡಿಕೊಂಡಿದ್ದರು. ಇತ್ತೀಚಿಗೆ ಅವರು ಯಾವುದೇ ರಾಜಕೀಯ ಟ್ವೀಟ್ ಗಳನ್ನು ಮಾಡಿಲ್ಲ. ಏಕಾಏಕಿ ಯಾಕೆ ನಮ್ಮ ನಾಯಕರ ಮೇಲೆ ಬಿದ್ದಿದ್ದಾರೆ. ಇದರಲ್ಲಿ ಯಾವುದೋ ಒಳ ಉದ್ದೇಶ ಇದೆ. ಆಕೆಗೆ ಯಾರೂ ಹೆಚ್ಚು ಇಂಪಾರ್ಟೆನ್ಸ್ ಕೊಡಬಾರದು” ಎಂದು ಮಾಧ್ಯಮಗಳಿಗೆ ಕೈಮುಗಿದು ಕೇಳಿಕೊಂಡರು.

”ರಮ್ಯಾ ಅವರು ಒಳ್ಳೆಯವರೇ, ಚಿಕ್ಕ ವಯಸ್ಸಿನಲ್ಲಿ ಸಂಸದರಾದವರು. ರಮ್ಯ ಈಗಾಗಲೇ ಒಳ್ಳೆಯ ಸಾಧನೆಗಳನ್ನು ಮಾಡಿದ್ದಾರೆ. ನಾನು ರಮ್ಯಾ ಅವರ ವಿರುದ್ಧ ಇಲ್ಲ. ಆದರೆ ಇಂತಹ ಚೀಪ್ ಪಾಲಿಟಿಕ್ಸ್ ಮಾಡಬಾರದು. ಅವರ ಆರೋಗ್ಯ ತಪಾಸಣೆ ಮಾಡಿಸಬೇಕು” ಎಂದರು.

Advertisement

Udayavani is now on Telegram. Click here to join our channel and stay updated with the latest news.

Next