Advertisement

28ರವರೆಗೆ ನಲಪಾಡ್‌ ನ್ಯಾಯಾಂಗ ಬಂಧನ

11:52 AM May 25, 2018 | |

ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್‌ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪಿ ಮೊಹಮದ್‌ ನಲಪಾಡ್‌ ಹ್ಯಾರಿಸ್‌ ಜಾಮೀನು ಅರ್ಜಿ ವಿಚಾರಣೆಯನ್ನು ಸೆಷನ್ಸ್‌ ನ್ಯಾಯಾಲಯ  ಮೇ 28ಕ್ಕೆ ಮುಂದೂಡಿದೆ.

Advertisement

ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಕೆ ಹಿನ್ನೆಲೆಯಲ್ಲಿ, ಮೊಹಮದ್‌ ನಲಪಾಡ್‌ ಜಾಮೀನು ಕೋರಿ ಮತ್ತೂಮ್ಮೆ ಸೆಷನ್ಸ್‌ ನ್ಯಾಯಾಲಕ್ಕೆ ಅರ್ಜಿ ಸಲ್ಲಿಸಿದ್ದರು.ಈ ಅರ್ಜಿ ವಿಚಾರಣೆಯನ್ನು ಗುರುವಾರ ನ್ಯಾಯಾಲಯ ವಿಚಾರಣೆಗೆ ಕೈಗೆತ್ತಿಕೊಂಡಿತ್ತು.

ಜಾಮೀನು ಅರ್ಜಿ ಸಂಬಂಧ ವಿಶೇಷ  ಅಭಿಯೋಜಕ ಶ್ಯಾಮ್‌ಸುಂದರ್‌ ಅಕ್ಷೇಪಣೆ ಸಲ್ಲಿಸಿದರು.ಕೆಲಕಾಲ ವಾದ -ಪ್ರತಿವಾದ ಆಲಿಸಿದ ನ್ಯಾಯಾಲಯ, ಮೇ28ಕ್ಕೆ ವಿಚಾರಣೆ ಮುಂದೂಡಿ ನಲಪಾಡ್‌ ನ್ಯಾಯಾಂಗ ಬಂಧನವನ್ನೂ ವಿಸ್ತರಿಸಿತು.

ಫೆ. 17ರಂದು ರಾತ್ರಿ ಫ‌ರ್ಜಿ ಕೆಫೆಯಲ್ಲಿ ಉದ್ಯಮಿ ಲೋಕನಾಥ್‌ ಪುತ್ರ ವಿದ್ವತ್‌ ಮೇಲೆ ನಲಪಾಡ್‌ ಹಾಗೂ ಆತನ ಸಹಚರರು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಈ ಪ್ರಕರಣ ಸಂಬಂಧ ಕಳೆದ ಮೂರು ತಿಂಗಳಿನಿಂದ ನಲಪಾಡ್‌ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಈ ಹಿಂದೆ ಜಾಮೀನು ಕೋರಿ ನಲಪಾಡ್‌ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಅಧೀನ ನ್ಯಾಯಾಲಯ ಹಾಗೂ ಹೈಕೋರ್ಟ್‌ನಲ್ಲಿ ತಿರಸ್ಕೃತಗೊಂಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next