Advertisement

ನಾಲತವಾಡ:‌ ಚಾಲಕನ ನಿಯಂತ್ರಣ ತಪ್ಪಿ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ ಪಲ್ಟಿ

04:34 PM Nov 10, 2022 | Kavyashree |

ನಾಲತವಾಡ: ಕಾರ್ಖಾನೆಗೆ ಕಬ್ಬು ಸಾಗಿಸುತ್ತಿದ್ದ ಕಬ್ಬಿನ ಟ್ರ್ಯಾಕ್ಟರ್‌ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡದ ಹೊರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ನಾಗನಗೌಡ ಪಾಟೀಲ್ ಎಂಬುವರು ಟ್ರ್ಯಾಕ್ಟರ್‌ ಚಾಲಕನಾಗಿದ್ದು, ಆತನಿಗೆ ಯಾವುದೇ ರೀತಿಯಲ್ಲಿ ಪ್ರಾಣ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.

ಲಕ್ಷಾಂತರ ಮೌಲ್ಯದ ಕಬ್ಬು ಹಾನಿಯಾಗಿದ್ದು, ವಿಜಯಪುರ ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next