Advertisement

ಬಿಜೆಪಿ ಪಕ್ಷದತ್ತ ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್?

12:26 PM Nov 16, 2020 | keerthan |

ಮಂಗಳೂರು: ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಅವರು ಭಾರತೀಯ ಜನತಾ ಪಕ್ಷಕ್ಕೆ ಸೇರಲಿದ್ದಾರೆಯೇ? ಹೀಗೊಂದು ಪ್ರಶ್ನೆ ಇದೀಗ ಕರಾವಳಿ ವಲಯದಲ್ಲಿ ಎದ್ದಿದೆ. ಇದಕ್ಕೆ ಕಾರಣವಾಗಿದ್ದು ಮಂಗಳೂರಿನಲ್ಲಿ ನಡೆದ 67ನೇ ಅಖಿಲ ಭಾರತ ಸಹಕಾರ ಸಪ್ತಾಹದ ಕಾರ್ಯಕ್ರಮ.

Advertisement

ರವಿವಾರ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಅವರು, ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಅವರಿಗೆ ತಮ್ಮ ಪಕ್ಷ ಸೇರುವಂತೆ ಪರೋಕ್ಷ ಆಹ್ವಾನ ನೀಡಿದರು.

ಇದನ್ನೂ ಓದಿ:ಕೃಷಿಯತ್ತ ಪದವೀಧರರ ಒಲವು : ಕೃಷಿಮೇಳದಲ್ಲಿ ಹೆಚ್ಚು ಓದಿದವರಿಂದಲೇ ಮಾಹಿತಿ ಸಂಗ್ರಹ

ಕೇಂದ್ರ ಸರಕಾರದ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಜಾರಿಗೊಳಿಸುತ್ತಿರುವ ಅವರು ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದ ನಾಯಕರಾಗಬೇಕೆನ್ನುವುದು ನಮ್ಮೆಲ್ಲರ ಆಸೆ. ಇದು ಬಹಿರಂಗವಾಗಿ ಚರ್ಚಿಸುವ ವಿಚಾರ ಅಲ್ಲವಾದ್ದರಿಂದ ಅವರ ಬಳಿ ವೈಯಕ್ತಿಕವಾಗಿ ಮಾತನಾಡುತ್ತೇನೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next