Advertisement

ಕಾಂಗ್ರೆಸ್‌ ಜೋಡೋ ಮಾಡ್ತಾರಾ? ಚೋಡೋ ಮಾಡ್ತಾರಾ?: ನಳಿನ್ ಕುಮಾರ್‌ ಕಟೀಲ್‌

10:29 PM Aug 20, 2022 | Team Udayavani |

ಬೆಂಗಳೂರು: ಸಿದ್ದರಾಮಯ್ಯ ಅವರು ಹಿಂದೂ ಧರ್ಮದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್‌ ಅವರನ್ನು ಅಪಮಾನಿಸಿದ್ದಾರೆ. ಇವೆರಡನ್ನು ಕಾಂಗ್ರೆಸ್‌ನಲ್ಲೇ ವಿರೋಧಿಸುತ್ತಿರುವುದು ಕೊಡಗಿನ ಘಟನೆಯಿಂದ ಸ್ಪಷ್ಟವಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್‌ ಕಟೀಲ್‌ ತಿಳಿಸಿದ್ದಾರೆ.

Advertisement

ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನ ಹಿಂದೂ ವಿರೋಧಿ ನೀತಿಯನ್ನು ಗಮನಿಸಿ ಆ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್‌ ತೊರೆಯುತ್ತಿದ್ದಾರೆ. ಅದರ ಪರಿಣಾಮ ಮೊಟ್ಟೆ ಎಸೆದಿರುವುದಾಗಿ ಕಾಂಗ್ರೆಸ್‌ ಕಾರ್ಯಕರ್ತ ಉಲ್ಲೇಖಿಸಿದ್ದಾನೆ ಎಂದು ಹೇಳಿದರು.

ಕಾಂಗ್ರೆಸ್‌ ಜೋಡೋ ಮಾಡ್ತಾರಾ? ಚೋಡೋ ಮಾಡ್ತಾರಾ? ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಕೇಳಿದ ಅವರು, ಹಿಂದಿನಿಂದ ಡಿ.ಕೆ. ಶಿವಕುಮಾರ್‌ ಮೊಟ್ಟೆ ಎಸೆಯುವಂತೆ ಮಾಡಿದ್ದಾರಾ ಎಂಬುದೂ ತನಿಖೆಗೆ ಒಳಪಡಬೇಕಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next