Advertisement

Mangaluru: ರಾಜ್ಯ ಸರಕಾರದಿಂದ ರೈತರಿಗೆ ಅನ್ಯಾಯ: ಕಟೀಲ್ ಆರೋಪ

12:35 PM Aug 31, 2023 | Team Udayavani |

ಮಂಗಳೂರು: ತಮಿಳುನಾಡಿಗೆ ನೀರು ಬಿಟ್ಟಿರುವುದರಿಂದ ರಾಜ್ಯದ ರೈತರಿಗೆ ತೊಂದರೆಯಾಗಲಿದೆ. ರಾಜ್ಯ ಸರಕಾರ ನಮ್ಮ ನಾಡಿನ ರೈತರಿಗೆ ನ್ಯಾಯ ಕೊಡುತ್ತಿಲ್ಲ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.

Advertisement

ಮಂಗಳೂರಿನಲ್ಲಿ ಮಾತನಾಡಿದ ಅವರು, ನೀರಿನ ಸಮಸ್ಯೆಯಿಂದಾಗಿ ರಾಜ್ಯದಲ್ಲಿ ಸದ್ಯ ಬರ ಪರಿಸ್ಥಿತಿ ಉಂಟಾಗಿದೆ. ರೈತರ ಪಂಪ್ ಸೆಟ್ ಗಳಿಗೂ ಸಮರ್ಪಕ ವಿದ್ಯುತ್ ನೀಡುತ್ತಿಲ್ಲ. ರಾಜ್ಯ ಸರಕಾರದ ಈ ನಡೆಯ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಹೇಳಿದರು.

ಮಾನದಂಡವಿಲ್ಲದ ಗ್ಯಾರೆಂಟಿಯನ್ನು ಕಾಂಗ್ರೆಸ್ ಚುಣಾವಣೆ ಪೂರ್ವದಲ್ಲಿ ಘೋಷಿಸಿತ್ತು. ಇದೀಗ ಮಾನದಂಡವನ್ನು ಹಾಕಲಾಗಿದೆ. ಗೃಹಜ್ಯೋತಿ ಹೆಸರಿನಲ್ಲಿ ರಾಜ್ಯವನ್ನು ಕತ್ತಲಿನಲ್ಲಿ ಇಡಲಾಗಿದೆ ಎಂದು ಟೀಕಿಸಿದರು.

ಇದನ್ನೂ ಓದಿ: Jammu Kashmir; ಯಾವುದೇ ಕ್ಷಣದಲ್ಲಿ ಚುನಾವಣೆ ನಡೆಸಲು ಸಿದ್ದರಿದ್ದೇವೆ: ಕೇಂದ್ರ ಸರ್ಕಾರ

Advertisement

Udayavani is now on Telegram. Click here to join our channel and stay updated with the latest news.

Next