Advertisement

ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾದ ನಳಿನ್ ಕುಮಾರ್ ಕಟೀಲ್

12:00 AM Aug 04, 2022 | Team Udayavani |

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ದಕ್ಷಿಣ ಕನ್ನಡ ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ಬುಧವಾರ ಹೊಸದಿಲ್ಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿದರು.

Advertisement

ಇತ್ತೀಚೆಗೆ ಹತ್ಯೆಗೊಳಗಾದ ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್‌ ನೆಟ್ಟಾರು ಪ್ರಕರಣದ ತನಿಖೆಯನ್ನು ಎನ್‌ಐಎ ವಹಿಸಿಕೊಂಡಿರುವುದಕ್ಕೆ ಧನ್ಯವಾದ ಸಲ್ಲಿಸಿದ ಸಂಸದ ನಳಿನ್‌, ಈ ಪ್ರಕರಣದ ತನಿಖೆಯಲ್ಲಿ ವಿಶೇಷ ಕಾಳಜಿ ವಹಿಸಲು ಅಧಿಕಾರಿಗಳಿಗೆ ಸೂಚಿಸುವಂತೆ ವಿನಂತಿಸಿದರು.

ರಾಜ್ಯದಲ್ಲಿ ಎನ್‌ಐಎಯನ್ನು ಬಲಗೊಳಿಸುವುದರೊಂದಿಗೆ ಎನ್‌ಐಎಗೆ ವಹಿಸಿರುವ ಪ್ರಕರಣಗಳ ತನಿಖೆಯನ್ನು ಶೀಘ್ರವಾಗಿ ಕೈಗೊಂಡು ಅಪರಾಧ ಕೃತ್ಯ ಎಸಗುವವರಿಗೆ ಕಠಿನ ಸಂದೇಶವನ್ನು ನೀಡಲಾಗುವುದು ಮತ್ತು ಈ ಪ್ರಕರಣವನ್ನು ಎನ್‌ಐಎ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸುವಂತೆ ಗೃಹ ಸಚಿವರು ಸೂಚಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next