Advertisement

ಕಾಂಗ್ರೆಸ್‌ ಇತಿಹಾಸ ಅರಿತು ಸಿದ್ದು ಟೀಕೆ ಮಾಡಲಿ: ಕಟೀಲ್‌ 

01:06 PM Oct 05, 2021 | Team Udayavani |

ಹುಬ್ಬಳ್ಳಿ: ಬಿಜೆಪಿಯನ್ನು ಕೊಲೆಗಡುಕ ಸರಕಾರ, ಪಕ್ಷ ಎನ್ನುವ ಮೊದಲು ಕಾಂಗ್ರೆಸ್‌ ಇತಿಹಾಸವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಅವರು ತಿಳಿದುಕೊಳ್ಳುವುದು ಸೂಕ್ತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲು ತಿರುಗೇಟು ನೀಡಿದರು.

Advertisement

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ದೆಹಲಿಯಲ್ಲಿ ಕಾಂಗ್ರೆಸ್‌ ಸರಕಾರವಿದ್ದ ಸಂದರ್ಭ ಗೋ ಹತ್ಯೆ ನಿಷೇಧ ಕಾಯ್ದೆಗೆ ಒತ್ತಾಯಿಸಿ ಪ್ರತಿಭಟನೆ ನಡೆಯುತ್ತಿತ್ತು. ಆಗ ನಾಲ್ವರು ಸಾಧುಗಳನ್ನು ಗುಂಡಿಕ್ಕಿ ಕೊಲೆ ಮಾಡಲಾಯಿತು. ಇದು ಕಾಂಗ್ರೆಸ್‌ ಪಕ್ಷದ ಕೊಲೆಗಡುಕತನವಲ್ಲವೇ. ಇನ್ನು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭ ರಾಜ್ಯದಲ್ಲಿ ಮೂರುಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಕೊಲೆಗಡುಕತನ ಅಲ್ಲವೇ ಎಂದು ತಿರುಗೇಟು ನೀಡಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಏಳು ವರ್ಷದ ಯೋಜನೆ ಹಾಗೂ ಕಾರ್ಯಗಳನ್ನು ಜನರಿಗೆ ತಿಳಿಸುವ, ತಲುಪಿಸುವ ಕಾರಣಕ್ಕೆ ಪಕ್ಷದಿಂದ “ನವಭಾರತ’ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಮೂಲಕ ಕೇಂದ್ರದ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ನೀಡುವುದು, ಜಾಗೃತಿ ಮೂಡಿಸುವ ಕೆಲಸ ದೇಶಾದ್ಯಂತ ನಡೆಯುತ್ತಿದೆ. ಇದೊಂದು ಉತ್ತಮ ಕಾರ್ಯ. ಯುವಕರಿಗೆ ಸ್ಫೂರ್ತಿ ನೀಡುವಂತಹ ಅವರ ಬಾಲ್ಯದ ಘಟನೆಗಳನ್ನು ಇಲ್ಲಿ ಪ್ರದರ್ಶನ ಮಾಡಿರುವುದು ಉತ್ತಮ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next