Advertisement

ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುತ್ತೇವೆ; ತುಳುವಿನಲ್ಲಿ ಟ್ವೀಟ್ ಮಾಡಿದ ನಳಿನ್ ಕಟೀಲ್

03:40 PM Jun 13, 2021 | Team Udayavani |

ಮಂಗಳೂರು: ತುಳು ಭಾಷೆಯನ್ನು ಕರ್ನಾಟಕ ಮತ್ತು ಕೇರಳ ಸರಕಾರ ಅಧಿಕೃತ ರಾಜ್ಯ ಭಾಷೆಯನ್ನಾಗಿ ಮಾಡಬೇಕು ಎಂದು ಒತ್ತಾಯಿಸಿ ತುಳು ಭಾಷಿಗರಿಂದ ಟ್ವಿಟರ್ ಅಭಿಯಾನ ಆರಂಭಗೊಂಡಿದೆ. ಈ ಅಭಿಯಾನಕ್ಕೆ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದು, ಶೀಘ್ರವೇ ಈ ಮಾನ್ಯತೆ ನೀಡುವ ಕಾರ್ಯ ಮಾಡುವುದಾಗಿ ತುಳುವಿನಲ್ಲಿ ಟ್ವೀಟ್ ಮಾಡಿದ್ದಾರೆ.

Advertisement

ರವಿವಾರ ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಆಯೋಜಿಸಲಾದ ಟ್ವೀಟ್ ಅಭಿಯಾನಕ್ಕೆ ಸಾವಿರಾರು ಮಂದಿ ಟ್ವೀಟ್ ಮಾಡಿ ಬೆಂಬಲ ಸೂಚಿಸಿದ್ದಾರೆ. #TuluTo8thSchedule, #TuluOfficialinKA_KL ಎಂಬ ಹ್ಯಾಷ್ ಟ್ಯಾಗ್ ನಡಿ ಟ್ವೀಟ್ ಮಾಡಲಾಗುತ್ತಿದೆ.

ಇದನ್ನೂ ಓದಿ:ತುಳು ಭಾಷೆಗೆ ಅಧಿಕೃತ ಮಾನ್ಯತೆ; ಟ್ವೀಟ್ ಅಭಿಯಾನದಲ್ಲಿ 1 ಲಕ್ಷಕ್ಕೂ ಹೆಚ್ಚಿನ ಟ್ವೀಟ್ ದಾಖಲು

ಇದಕ್ಕೆ ಪ್ರತಿಕ್ರಿಯೆ ನೀಡಿರುವ ನಳಿನ್ ಕುಮಾರ್ ಕಟೀಲ್, “ಪೆದ್ದ್ ತಾಂಕಿದಿನ ಅಪ್ಪೆ ಲೆಕ ಮಟ್ಟೆಲ್ ಡ್ ಮಾನಾಯಿನ ಅಪ್ಪೆ ಬಾಸೆಗ್ ರಾಜ್ಯ ಬಾಸೆದ ಮಾನಾದಿಗೆ ತಿಕ್ಕೊಡು ಪನ್ಪಿನ ಪೊರಂಬಾಟಗ್ ಎನ್ನ ಬೆರಿಸಾಯ ಉಂಡು. ತುಲು ಬಾಸೆನ್ 8ನೇ ಪರಿಚ್ಛೇದಗ್ ಸೇರ್ಪಾವರೆ ಸರಕಾದೊಟ್ಟುಗು ಪಾತೆರಕತೆ ಆವೊಂದುಂಡು. ಒಂಜಾತ್ ತಾಂತ್ರಿಕ ದೋಷಲೆನ್ ಸರಿ ಮಲ್ತ್ದ್ ನಮ್ಮ ಅವಧಿಡ್ ತುಲು ಬಾಸೆಗ್ ರಾಜ್ಯದ ಅಧಿಕೃತ ಬಾಸೆ ಪನ್ಪುನ ಮಾನಾದಿಗೆ ಕೊರ್ಪಾವ. ( ಹೆತ್ತ ತಾಯಿಯಂತಿರುವ ನಮ್ಮ ಮಾತೃಭಾಷೆಗೆ ರಾಜ್ಯ ಭಾಷೆಯ ಮಾನ್ಯತೆ ಸಿಗಬೇಕೆಂಬ ಹೋರಾಟಕ್ಕೆ ನನ್ನ ಬೆಂಬಲವಿದೆ. ತುಳು ಭಾಷೆಯನ್ನು ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಸರ್ಕಾರದೊಂದಿಗೆ ಮಾತುಕತೆ ನಡೆಯುತ್ತಿದೆ. ಒಂದಷ್ಟು ತಾಂತ್ರಿಕ ದೋಷಗಳನ್ನು ಸರಿಪಡಿಸಿ ನಮ್ಮ ಅವಧಿಯಲ್ಲೇ ತುಳು ಭಾಷೆಗೆ ರಾಜ್ಯದ ಅಧಿಕೃತ ಭಾಷೆ ಎಂಬ ಮಾನ್ಯತೆ ಕೊಡಿಸುತ್ತೇವೆ) ಎಂದು ಕಟೀಲ್ ಹೇಳಿದ್ದಾರೆ.

ಸಚಿವ ಕೋಟ ಬೆಂಬಲ: ಈ ಅಭಿಯಾನಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬೆಂಬಲ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ತುಳು ರಾಜ್ಯದ ಆಡಳಿತಾತ್ಮಕ ಭಾಷೆ ಆಗಬೇಕು, ತುಳುವಿಗೆ ವಿಶೇಷ ಮಾನ್ಯತೆ ಸಿಗಬೇಕೆನ್ನುವ ತುಳುನಾಡಿನ ಬಂಧುಗಳ ಹೋರಾಟಕ್ಕೆ ನನ್ನದೂ ಧ್ವನಿ ಇದೆ. ತುಳು ಒಂದು ಭಾಷೆ ಮಾತ್ರವಲ್ಲ, ತುಳು ಒಂದು ಸಂಸ್ಕೃತಿ-ಪರಂಪರೆ. ಅದ್ಭುತ ಇತಿಹಾಸ ಇರುವ ತುಳುನಾಡಿನ ಭಾಷೆಗೆ ಶೀಘ್ರ ವಿಶೇಷ ಮಾನ್ಯತೆ ಸಿಗಬೇಕು ಎನ್ನುವುದು ನನ್ನ ಆಶಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next