Advertisement

ಡಿಎಂಎಪ್ ನಿಧಿಯಲ್ಲಿ ಆಕ್ಸಿಜನ್ ಟ್ಯಾಂಕರ್ ಖರೀದಿ: ನಿರಾಣಿ ಕಾರ್ಯಶೈಲಿಗೆ ಕಟೀಲು ಮೆಚ್ಚುಗೆ

12:07 PM May 13, 2021 | Team Udayavani |

ಬೆಂಗಳೂರು: ಆಮ್ಲಜನಕ ಟ್ಯಾಂಕರ್ ಖರೀದಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತವು ಖನಿಜ ಅಭಿವೃದ್ಧಿ ನಿಧಿ (ಎಂಡಿಎಫ್) ಅಡಿಯಲ್ಲಿ ಲಭ್ಯವಿರುವ ಹಣವನ್ನು ಬಳಸಿಕೊಳ್ಳಲು ಅವಕಾಶ ನೀಡಿದ್ದಕ್ಕಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ಮತ್ತು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

Advertisement

ದಕ್ಷಿಣ ಕನ್ನಡ ಜಿಲ್ಲೆಗೆ ಎಂಡಿಎಫ್ ಅಡಿಯಲ್ಲಿ ಆಕ್ಸಿಜನ್ ಸಂಗ್ರಹಿಸಲು ಅಗತ್ಯವಾದ ಆಮ್ಲಜನಕ ಟ್ಯಾಂಕರ್ ಖರೀದಿಸಲು ಮತ್ತು ಅದನ್ನು ಜಿಲ್ಲೆಯ ಆಸ್ಪತ್ರೆಗಳಿಗೆ ಸಾಗಿಸಲು ಕೋವಿಡ್ -19 ಗೆ ಚಿಕಿತ್ಸೆ ನೀಡಲು ಸಚಿವ ಮುರುಗೇಶ್ ನಿರಾಣಿ ಅವಕಾಶ ಮಾಡಿಕೊಟ್ಟಿದ್ದಾರೆ. ಇದಕ್ಕಾಗಿ ನಳಿನ್ ಕುಮಾರ್ ಕಟೀಲ್ ಮೆಚ್ಚುಗೆ ಸೂಚಿಸಿದ್ದಾರೆ.

ನಳಿನ್ ಕುಮಾರ್ ಕಟೀಲ್ ಅವರು ‌ಸಚಿವ ಮುರುಗೇಶ್ ನಿರಾಣಿಯವರ ಜೊತೆ ಮಾತುಕತೆ ನಡೆಸಿ ಜಿಲ್ಲೆಯಲ್ಲಿ ಆಕ್ಸಿಜನ್ ಸಂಗ್ರಹಿಸಲು ಮತ್ತು ಸಾಗಿಸಲು 24 ಮೆಟ್ರಿಕ್ ಟನ್ ಆಕ್ಸಿಜನ್ ಸಂಗ್ರಹ ಸಾಮರ್ಥ್ಯದ  ಆಕ್ಸಿಜನ್ ಟ್ಯಾಂಕರ್ ಖರೀದಿ ಮಾಡಲು  ಎಂಡಿಎಫ್ ನಿಧಿ ಬಳಸಿಕೊಳ್ಳುವಂತೆ ಮನವಿ ಮಾಡಿದ್ದರು. ಇದಕ್ಕೆ ಸಚಿವ ನಿರಾಣಿ ಅವರು ತಕ್ಷಣವೇ ಕಾರ್ಯಪ್ರವೃತ್ತರಾಗಿ‌ ಅಗತ್ಯವಿರುವ ಕಡೆ ಆಕ್ಸಿಜನ್ ಟ್ಯಾಂಕರ್ ಖರೀದಿಸಲು ತೀರ್ಮಾನಿಸಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯಂತೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದಲೂ ಬೇಡಿಕೆ ಬಂದರೆ ಸಕಾರಾತ್ಮಕವಾಗಿ ಪರಿಗಣಿಸಲು ಸಚಿವ ನಿರಾಣಿ ಅವರು ತೀರ್ಮಾನಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next