Advertisement

ಸರಕಾರಕ್ಕೆ ಭಾರವಾದರೂ ಜನರ ಹೊರೆ ಇಳಿಸಿದ್ದ ಮುಖ್ಯಮಂತ್ರಿ: ನಳಿನ್‌ ಮೆಚ್ಚುಗೆ

09:49 PM Apr 28, 2022 | Team Udayavani |

ಬೆಂಗಳೂರು: ರಾಜ್ಯದ “ಕಾಮನ್‌ ಮ್ಯಾನ್‌ ಸಿಎಂ’ ಎಂದೇ  ಮೆಚ್ಚುಗೆ ಪಡೆದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಳೆದ ನವೆಂಬರ್‌ನಲ್ಲಿಯೇ ಪೆಟ್ರೋಲಿಯಂ ಉತ್ಪನ್ನಗಳ ಸುಂಕ ಕಡಿಮೆ ಮಾಡುವ ಮೂಲಕ ಜನರ ಹೊರೆಯನ್ನು ಕಡಿಮೆ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ  ನಳಿನ್‌ ಕುಮಾರ್‌ ಕಟೀಲು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Advertisement

ಈ ಕುರಿತು ಪತ್ರಿಕಾ ಪ್ರಕಟನೆ ಹೊರಡಿಸಿರುವ ಅವರು, ಪ್ರಧಾನಿ ನರೇಂದ್ರ ಮೋದಿಯವರ ಸಲಹೆಗೆ ಕೂಡಲೇ ಸ್ಪಂದಿಸಿದ್ದ ರಾಜ್ಯದ ಬಿಜೆಪಿ ಸರಕಾರವು ಸುಂಕ ಕಡಿಮೆ ಮಾಡಿದ್ದರಿಂದ ಖಜಾನೆಗೆ ಬರುವ 5,314 ಕೋಟಿ ರೂ. ಕಡಿಮೆ ಆಗಿದೆ. ಜನರ ಹೊರೆ ಕಡಿಮೆ ಮಾಡುವ ದೃಷ್ಟಿಯಿಂದ ನಮ್ಮ ಸರಕಾರ ಈ ಕ್ರಮ ಕೈಗೊಂಡಿದ್ದು,  ಇದಕ್ಕೆ ಜನಬೆಂಬಲ ಖಚಿತ ಎಂದಿದ್ದಾರೆ.

ಆದರೆ ಕಾಂಗ್ರೆಸ್‌ ಬೆಂಬಲಿತ ಸರಕಾರವಿರುವ ಮಹಾರಾಷ್ಟ್ರದಲ್ಲಿ  ಸುಂಕ ಕಡಿಮೆ ಮಾಡದೆ 3,472 ಕೋಟಿ ರೂ. ಹೆಚ್ಚುವರಿ ಆದಾಯವನ್ನು ಸಂಗ್ರಹಿಸಲಾಗಿದೆ. ಇದೇ ರೀತಿಯಲ್ಲಿ ತಮಿಳುನಾಡು ಸರಕಾರ 2,924 ಕೋಟಿ ರೂ., ಪಶ್ಚಿಮ ಬಂಗಾಲ ಸರಕಾರ 1,343 ಕೋಟಿ ರೂ. ಆದಾಯ ಗಳಿಸಿದೆ. ಆದರೆ ಬಿಜೆಪಿ ಆಡಳಿತವಿರುವ  ಎಲ್ಲ ರಾಜ್ಯ ಸರಕಾರಗಳೂ ಸುಂಕ ಕಡಿಮೆ ಮಾಡಿವೆ ಎಂದು ಅವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next