Advertisement

ನಲಪಾಡ್‌ ಜಾಮೀನು ಅರ್ಜಿ ವಿಚಾರಣೆ ಇಂದು

02:31 PM May 29, 2018 | Team Udayavani |

ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್‌ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಚಾರ್ಜ್‌ಶೀಟ್‌ ಕೂಡ ಸಲ್ಲಿಕೆಯಾಗಿದೆ. ಹೀಗಾಗಿ ಪ್ರಕರಣದ ಆರೋಪಿ ಮೊಹಮದ್‌ ನಲಪಾಡ್‌ಗೆ ಜಾಮೀನು ನೀಡುವಂತೆ ಅವರ ಪರ ವಕೀಲರು ಸೆಷನ್ಸ್‌ ನ್ಯಾಯಾಲಯಕ್ಕೆ ಕೋರಿದರು.

Advertisement

ನಲಪಾಡ್‌ ಜಾಮೀನು ಅರ್ಜಿ ವಿಚಾರಣೆಯನ್ನು ಸೋಮವಾರ ನಡೆಸಿದ ಸೆಷನ್ಸ್‌ ನ್ಯಾಯಾಲಯದ ಮುಂದೆ ವಾದಿಸಿದ ನಲಪಾಡ್‌ ಪರ ವಕೀಲರು, ಪ್ರಕರಣದ ತನಿಖೆ ಸಂಪೂರ್ಣ ಪೂರ್ಣಗೊಂಡಿದ್ದು, ಚಾರ್ಜ್‌ಶೀಟ್‌ ಕೂಡ ಸಲ್ಲಿಕೆಯಾಗಿದೆ. ಕಳೆದ 100 ದಿನಗಳಿಂದ ಆರೋಪಿ ಜೈಲಿನಲ್ಲಿದ್ದಾರೆ. ಗಾಯಾಳು ವಿದ್ವತ್‌ ಕೂಡ ಡಿಸಾcರ್ಜ್‌ ಆಗಿದ್ದಾರೆ. ಅಲ್ಲದೆ ಇದೇ ಪ್ರಕರಣದ ಮತ್ತೂಬ್ಬ ಆರೋಪಿಗೆ ಹೈಕೋರ್ಟ್‌ ಜಾಮೀನು ನೀಡಿದೆ.

ಆರೋಪಿ ಬಿಡುಗಡೆಯಾದರೂ ಸಾಕ್ಷಿಗಳ ಮೇಲೆ ಪ್ರಭಾವ ಬೀರುವುದಿಲ್ಲ. ನ್ಯಾಯಾಲಯ ವಿಧಿಸುವ ಷರತ್ತುಗಳಿಗೆ ಬದ್ಧವಾಗಲಿದ್ದಾರೆ ಎಂಬಿತ್ಯಾದಿ ಅಂಶಗಳನ್ನು ಉಲ್ಲೇಖೀಸಿ ಜಾಮೀನು ನೀಡುವಂತೆ ಕೋರಿದರು. ವಾದ ಆಲಿಸಿದ ನ್ಯಾಯಾಲಯ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿತು. ಇಂದು ವಿಶೇಷ ಸರ್ಕಾರಿ ಅಭಿಯೋಜಕರಾಗಿರುವ ಶ್ಯಾಮ್‌ಸುಂದರ್‌ ವಾದಿಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next