Advertisement

Namami Gange: ಅಲಕಾನಂದ ನದಿ ತೀರದಲ್ಲಿ ವಿದ್ಯುತ್‌ ಪ್ರವಹಿಸಿ 15 ಮಂದಿ ದುರಂತ ಅಂತ್ಯ

01:57 PM Jul 19, 2023 | Team Udayavani |

ನವದೆಹಲಿ: ಉತ್ತರಾಖಂಡದ ಚಮೋಲಿಯ ಅಲಕಾನಂದ ನದಿ ದಡದ ಬಳಿ ವಿದ್ಯುತ್‌ ಪ್ರವಹಿಸಿ ಸಬ್‌ ಇನ್ಸ್‌ ಪೆಕ್ಟರ್‌, ಹೋಮ್‌ ಗಾರ್ಡ್ಸ್‌ ಸೇರಿದಂತೆ 15 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.

Advertisement

ಇದನ್ನೂ ಓದಿ:ಮಹಾ ಮಳೆಗೆ ನಲುಗಿದ ಗುಜರಾತ್: ರಸ್ತೆಗಳು ಜಲಾವೃತ, ಮುಳುಗಿದ ಕಾರುಗಳು, ಜನಜೀವನ ಅಸ್ತವ್ಯಸ್ತ

ಚಮೋಲಿಯ ಅಲಕಾನಂದ ನದಿ ಬಳಿ ನಮಾಮಿ ಗಂಗೆ ಯೋಜನೆಯ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಟ್ರಾನ್ಸ್‌ ಫಾರ್ಮರ್‌ ಸ್ಫೋಟಗೊಂಡು, ವಿದ್ಯುತ್‌ ಪ್ರವಹಿಸಿದ ಪರಿಣಾಮ ಈ ದುರ್ಘಟನೆ ನಡೆದಿದ್ದು, ಘಟನೆ ಬಗ್ಗೆ ತನಿಖೆಗೆ ಆದೇಶ ನೀಡಲಾಗಿದೆ ಎಂದು ಪೊಲೀಸ್‌ ಮಹಾನಿರ್ದೇಶಕ ಅಶೋಕ್‌ ಕುಮಾರ್‌ ತಿಳಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಮತ್ತು ರಕ್ಷಣಾ ತಂಡ ಘಟನಾ ಸ್ಥಳಕ್ಕೆ ತಲುಪಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿರುವುದಾಗಿ ವರದಿ ವಿವರಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next