Advertisement

ನಮಾಜ್‌ ವೇಳೆ ಗಣಪತಿ ವಿಸರ್ಜನೆ ಬೇಡ : ಉದ್ವಿಗ್ನ ವಾತಾವರಣ

03:56 PM Aug 27, 2017 | |

 ಕೋಲಾರ : ಇಲ್ಲಿ ಭಾನುವಾರ ನಡೆಯುತ್ತಿದ್ದ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಭಿನ್ನ ಕೋಮುಗಳ ನಡುವೆ ಉದ್ವಿಗ್ನ ವಾತಾವರಣ ನಿರ್ಮಾಣವಾದ ಘಟನೆ ನಡೆದಿದೆ. 

Advertisement

ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ  ಪಟಾಕಿಗಳನ್ನು ಸಿಡಿಸಲಾಗುತ್ತಿತ್ತು. ಮೆರವಣಿಗೆ ಸಾಗುವ ಮಾರ್ಗವಾದ ಕ್ಲಾಕ್‌ ಟವರ್‌ ಪ್ರದೇಶದಲ್ಲಿರುವ ಮಸೀದಿ ಬಳಿ ಪಟಾಕಿ ಸಿಡಿಸಬಾರುದು ಎಂಬ ತಕರಾರಿನ ಬಳಿಕ ಮಾತಿನ ಚಕಮಕಿ ಆರಂಭವಾಗಿದೆ.

ನಮಾಜ್‌ ನಡೆಯುವ ಸಂದರ್ಭ ಪಟಾಕಿ ಸಿಡಿಸಬಾರದು ಮತ್ತು ಮೆರವಣಿಗೆ ಸಾಗಬಾರದು ಎಂದು ಆಕ್ಷೇಪಿಸಲಾಗಿದೆ ಎಂದು ವರದಿಯಾಗಿದೆ. 

ಮೆರವಣಿಗೆಯಲ್ಲಿ ತೆರಳುತ್ತಿದ್ದವರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಪೊಲೀಸರು ಹೆಚ್ಚುವರಿ ಪೊಲೀಸರನ್ನು ಕರೆಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು. 

ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next