Advertisement

ನಂದ ಕುಮಾರ್‌ ಪಕ್ಷೇತರರಾಗಿ ಸ್ಪರ್ಧಿಸಲು ಅಭಿಮಾನಿಗಳ ಆಗ್ರಹ

12:39 AM Apr 10, 2023 | Team Udayavani |

ಸುಳ್ಯ: ನಂದ ಕುಮಾರ್‌ ಅಭಿಮಾನಿಗಳು ಸಲ್ಲಿಸಿರುವ ಬೇಡಿಕೆಗಳಿಗೆ ಕಾಂಗ್ರೆಸ್‌ ನಾಯಕರು ಯಾವುದೇ ರೀತಿಯಲ್ಲಿ ಸ್ಪಂದನೆ ನೀಡದೆ ಇದ್ದಲ್ಲಿ ಅಥವಾ ಸುಳ್ಯದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಂದ ಕುಮಾರ್‌ ಅವರಿಗೆ ಬಿ ಫಾರಂ ನೀಡದೆ ಇದ್ದಲ್ಲಿ ಅವರನ್ನು ಪಕ್ಷೇತರವಾಗಿ ಕಣಕ್ಕಿಳಿಸಲಾಗುವುದು ಎಂದು ಅವರ ಅಭಿಮಾನಿಗಳು ನಿರ್ಧಾರ ಕೈಗೊಂಡಿದ್ದಾರೆ.

Advertisement

ನಿಂತಿಕಲ್ಲಿನಲ್ಲಿ ರವಿವಾರ ನಡೆದ ನಂದ ಕುಮಾರ್‌ ಅಭಿಮಾನಿ ಬಳಗದ ಸಮಾವೇಶದಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಬಿ ಫಾರಂ ಕೊಡುವ ಮೊದಲು ಅಭ್ಯರ್ಥಿ ಬದಲಾಯಿಸಿ ನಂದ ಕುಮಾರ್‌ ಅವರಿಗೆ ನೀಡಬೇಕು. ಒಂದೇ ವೇಳೆ ಬೇಡಿಕೆ ಈಡೇರಿಸದಿದ್ದರೆ ನಂದ ಕುಮಾರ್‌ ಅವರನ್ನು ಪಕ್ಷೇತರವಾಗಿ ಕಣಕ್ಕಿಳಿಸುವಂತೆ ಸಮಾವೇಶದಲ್ಲಿದ್ದ ಕಾರ್ಯಕರ್ತರು ಒಕ್ಕೊರಲಿನಿಂದ ಚಪ್ಪಾಳೆ ತಟ್ಟಿ, ಘೋಷಣೆ ಕೂಗಿ ಆಗ್ರಹಿಸಿದರು.

ಕಾಂಗ್ರೆಸ್‌ನಿಂದ ಈಗಾಗಲೇ ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಜಿ. ಕೃಷ್ಣಪ್ಪ ಅವರಿಗೆ ಟಿಕೆಟ್‌ ನೀಡಲಾಗಿದೆ.

ಈ ಮಧ್ಯೆ, ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ ಅವರು ಕಡಬದಲ್ಲಿ ಪತ್ರಕರ್ತರ ಜತೆ ಮಾತನಾಡಿ, ಸಮಸ್ಯೆ ಯನ್ನು ಬಗೆಹರಿಸಲಾಗುತ್ತಿದೆ. ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ನಂದ ಕುಮಾರ್‌ ಜತೆ ಮಾತನಾಡಿದ್ದಾರೆ. ಟಿಕೆಟ್‌ ಕುರಿತಾಗಿ ಗೊಂದಲ ಇಲ್ಲ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next