Advertisement

ಡಿ.31ರ ರಾತ್ರಿ ನಂದಿಗಿರಿಧಾಮಕ್ಕೆ ಪ್ರವಾಸಿಗರಿಗೆ ಪ್ರವೇಶ ನಿಷೇಧ

11:21 PM Dec 23, 2020 | sudhir |

ಚಿಕ್ಕಬಳ್ಳಾಪುರ: ಕರ್ನಾಟಕದ ಊಟಿಯೆಂದು ಖ್ಯಾತಿ ಹೊಂದಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗಿರಿಧಾಮದಲ್ಲಿ ಡಿ.31ರ ರಾತ್ರಿ ಪ್ರವಾಸಿಗರಿಗೆ ಪ್ರವೇಶ ನಿಷೇಧಿಲಾಗಿದೆ.

Advertisement

ಜಿಲ್ಲೆಯ ಪ್ರವಾಸ ತಾಣಗಳಲ್ಲಿ ಕೋವಿಡ್‌-19 ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಪ್ರವಾಸಿಗರ ಪ್ರವೇಶಕ್ಕೆ ಅನುಕೂಲ ಕಲ್ಪಿಸಲಾಗಿದ್ದು ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಸ್ಯಾನಿಟೈಸರ್‌ ಬಳಸಲು ನಿರ್ದೇಶನ ನೀಡಲಾಗಿದೆ.

ಡಿ.31 ರ ರಾತ್ರಿ ಯಾವುದೇ ಪ್ರವಾಸಿಗರನ್ನು ನಂದಿ ಗಿರಿಧಾಮದಲ್ಲಿ ಉಳಿದುಕೊಳ್ಳಲು ನಿಷೇಧಿಸಲಾಗಿದೆ. ಜೊತೆಗೆ ಆನ್‌ಲೈನ್‌ ಬುಕ್ಕಿಂಗ್‌ ಸಹ ಸ್ಥಗಿತಗೊಳಿಸಲಾಗಿದೆ ಎಂದು ನಂದಿ ಗಿರಿಧಾಮದ ವಿಶೇಷ ಅಧಿಕಾರಿ ಗೋಪಾಲ್‌ ತಿಳಿಸಿದ್ದಾರೆ.

ಇದನ್ನೂ ಓದಿ:ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್‌ ಯೋಜನೆಗೆ ಸಂಪುಟ ಅಸ್ತು

ಕ್ರಿಸ್‌ಮಸ್‌ ಮತ್ತು ಹೊಸವರ್ಷದ ಅಂಗವಾಗಿ ನಂದಿ ಗಿರಿಧಾಮ ಸಹಿತ ಜಿಲ್ಲೆಯ ಪ್ರವಾಸಿತಾಣಗಳಲ್ಲಿ ಯಾವುದೇ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿಲ್ಲ. ಆದರೆ ಕೋವಿಡ್‌-19 ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಪ್ರವೇಶಕ್ಕೆ ಅನುಕೂಲ ಕಲ್ಪಿಸಲಾಗಿದೆ. ಈಗಾಗಲೇ ನಂದಿ ಗಿರಿಧಾಮದಲ್ಲಿ ಕೋವಿಡ್‌-19 ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೆ ನಿರ್ಲಕ್ಷ ವಹಿಸಿದ ಪ್ರವಾಸಿಗರಿಗೆ ದಂಡ ವಿಧಿಸುವ ಮೂಲಕ ಶಾಕ್‌ ನೀಡಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next