Advertisement

ತಡರಾತ್ರಿ ಲಾರಿಗೆ ಹಿಂದಿನಿಂದ ಬಂದ ಬೈಕ್ ಡಿಕ್ಕಿ: ಮೂವರ ದುರ್ಮರಣ

09:46 AM Dec 09, 2019 | keerthan |

ಬೆಳಗಾವಿ: ನಿಂತಿದ್ದ ಲಾರಿಗೆ ಹಿಂದಿನಿಂದ ಬಂದ ಬೈಕ್​ ಡಿಕ್ಕಿ ಹೊಡೆದ ಪರಿಣಾಮ ಮೂವರು ​ಸ್ಥಳದಲ್ಲೇ ಮೃತಪಟ್ಟ ಘಟನೆ ಖಾನಾಪುರ ತಾಲೂಕಿನ ನಂದಿಹಳ್ಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

Advertisement

ಇಲ್ಲಿನ ಕೇದನೂರು ಗ್ರಾಮದ ಕಲ್ಮೇಶ್ವರ ಗಲ್ಲಿಯ ನಿವಾಸಿಗಳಾದ ಸಂಜು ರಾಜಾಯಿ (29) ಸಂಭಾಜಿಗಲ್ಲಿಯ ಪ್ರಕಾಶ ಚಡಣಿ (27) ಪ್ರಭುದೇವಗಲ್ಲಿಯ ಅಡಿವೆಪ್ಪಾ ಗುಜ್ಜನವರ (39) ಮೃತಪಟ್ಟವರು.

ಮೂವರು  ನಿನ್ನೆ ತಡರಾತ್ರಿ ಭತ್ತದ ಒಕ್ಕಲು ಮುಗಿಸಿ ಒಂದೇ ಬೈಕ್ ನಲ್ಲಿ ಮನೆಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಭರಡೆ ಡಾಬಾ ಬಳಿ ರಸ್ತೆ ಬದಿಯಲ್ಲಿ ಲಾರಿ ನಿಂತಿತ್ತು. ಲಾರಿ ನಿಂತಿರುವುದು ಬೈಕ್​ ಸವಾರರಿಗೆ ಕಾಣಿಸದೆ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಗಾವಿ ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ

Advertisement
Advertisement

Udayavani is now on Telegram. Click here to join our channel and stay updated with the latest news.

Next