Advertisement

ಪತ್ನಿಯ ಜೊತೆ ಅನೈತಿಕ ಸಂಬಂಧ : ತನ್ನ ಸಂಬಂಧಿಕನನ್ನೇ ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ

12:06 AM Jun 06, 2022 | Team Udayavani |

ನಂಜನಗೂಡು : ತನ್ನ ಪತ್ನಿಯ ಜೊತೆ ಅನೈತಿಕ ಸಂಬಂಧ ಹೊಂದಿದ ಎಂಬ ವಿಚಾರಕ್ಕೆ ಸಂಬಂಧಿಯನ್ನೇ ಮಚ್ಚಿನಿಂದ ಹೊಡೆದು ಕೊಲೆಗೈದು ಬಳಿಕ ಪೊಲೀಸರಿಗೆ ಶರಣಾದ ಘಟನೆ ತಾಲೂಕಿನ ಕೌಲಂದೆ ಹೋಬಳಿಯ ಮಾಡ್ರಳ್ಳಿಯಲ್ಲಿ ನಡೆದಿದೆ.

Advertisement

ಮಾಡ್ರಳ್ಳಿಯ ಸಿದ್ದಶೆಟ್ಟಿ(47) ಮೃತ ದುರ್ದೈವಿ. ಕೊಲೆ ಮಾಡಿದ ಆರೋಪಿ ಶಿವಣ್ಣ(59) ಮಚ್ಚು ಸಮೇತ ಪೊಲೀಸರಿಗೆ ಶರಣಾಗಿದ್ದಾನೆ.

ಶಿವಣ್ಣನ ಪತ್ನಿಯ ಜೊತೆ ಸಿದ್ದಶೆಟ್ಟಿ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ ಈ ವಿಚಾರವಾಗಿ ಇಬ್ಬರ ನಡುವೆ ಹಲವು ಬಾರಿ ಗಲಾಟೆ ಕೂಡಾ ನಡೆದಿತ್ತು ಎನ್ನಲಾಗಿದೆ ಭಾನುವಾರ ಇದೇ ವಿಚಾರದಲ್ಲಿ ಇಬ್ಬರ ನಡುವೆ ಮತ್ತೆ ಮಾತಿನ ಚಕಮಕಿ ನಡೆಯುತ್ತಿದ್ದಾಗ. ಶಿವಣ್ಣ ಬೀಸಿದ ಮಚ್ಚಿನೇಟಿಗೆ ಸಿದ್ದಶೆಟ್ಟಿ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.

ಮೃತಪಟ್ಟಿರುವುದನ್ನು ಖಚಿತ ಪಡಿಸಿಕೊಂಡ ಶಿವಣ್ಣ ಮಚ್ಚು ಸಮೇತ ದೊಡ್ಡಕವಲಂದೆ ಠಾಣೆಗೆ ಬಂದು ಶರಣಾಗಿದ್ದಾನೆ.

ದೊಡ್ಡಕವಲಂದೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

ಇದನ್ನೂ ಓದಿ : ಕಡಿಯಾಳಿ: ದೇವಸ್ಥಾನ ವ್ಯವಸ್ಥಾಪನ ಸಮಿತಿಗಳ ಸಮಾವೇಶ: ದೇಗುಲ ಸ್ವಾಯತ್ತೆಗೆ ಪ್ರಯತ್ನ: ಕಶೆಕೋಡಿ

Advertisement

Udayavani is now on Telegram. Click here to join our channel and stay updated with the latest news.

Next