Advertisement

ನಂಜನಗೂಡು ಎರಡು ವರ್ಷದ ಮಗುವನ್ನು ಕೊಂದು, ತಾಯಿ ಆತ್ಮಹತ್ಯೆ ಶಂಕೆ

07:59 PM Dec 16, 2021 | Team Udayavani |

ಮೈಸೂರು : ಎರಡು ವರ್ಷದ ಮಗುವಿನ ದೇಹ ನೀರಿನ ತೊಟ್ಟಿಯಲ್ಲಿ ಪತ್ತೆಯಾದರೆ ಮಗುವಿನ ತಾಯಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮೈಸೂರಿನ ನಂಜನಗೂಡು ತಾಲ್ಲೂಕಿನ ಗಟ್ಟವಾಡಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

Advertisement

ಗಟ್ಟವಾಡಿ ಗ್ರಾಮದ ಮಹದೇವ ಪ್ರಸಾದ್ ಅಲಿಯಾಸ್ ರಚ್ಚು ಎಂಬುವರ ಪತ್ನಿ ಅನ್ನಪೂರ್ಣ (22) ಮೃತ ಮಹಿಳೆ ಹಾಗೂ ಅವರ ಎರಡು ವರ್ಷದ ಗಂಡು ಮಗು ಮೋಕ್ಷಿತ್ ಮೃತಪಟ್ಟವರು ಎನ್ನಲಾಗಿದೆ.

ಘಟನೆ ಕುರಿತು ಸಾಕಷ್ಟು ಅನುಮಾನಗಳು ಹುಟ್ಟಿಕೊಂಡಿದ್ದು ತನ್ನ ಎರಡು ವರ್ಷದ ಮಗುವಿನ ಮೃತದೇಹ ನೀರು ತುಂಬಿದ ಬಕೆಟ್ ನಲ್ಲಿ ಪತ್ತೆಯಾಗಿದೆ ಅದರ ಪಕ್ಕದಲ್ಲೇ ಅನ್ನಪೂರ್ಣ ಅವರ ದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಹೆತ್ತ ತಾಯಿಯೇ ಮಗುವನ್ನು ಕೊಂದು ಬಳಿಕ ತಾನು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದರೇ ಎಂಬ ಅನುಮಾನಗಳು ಹುಟ್ಟಿಕೊಂಡಿದೆ.

ಮೃತ ಮಹಿಳೆ ಅನ್ನಪೂರ್ಣ ಎಂಬುವರ ಪತಿ ಮಹದೇವ ಪ್ರಸಾದ್ ಅಲಿಯಾಸ್ ರಚ್ಚು ಕೃಷಿಕನಾಗಿದ್ದು ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದರು ಎನ್ನಲಾಗಿದೆ.

ಕೌಟುಂಬಿಕ ಕಲಹ ಎಂದು ಹೇಳಲಾದರೂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Advertisement

ಘಟನಾ ಸ್ಥಳಕ್ಕೆ ನಂಜನಗೂಡಿನ ಡಿವೈಎಸ್ಪಿ ಗೋವಿಂದ ರಾಜು ವೃತ್ತ ನಿರೀಕ್ಷಕ ಲಕ್ಷ್ಮೀಕಾಂತ ತಳವಾರ ದೊಡ್ಡಕವಲಂದೆ ಪಿಎಸ್ ಐ ಮಹೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸರಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ.

ಇದನ್ನೂ ಓದಿ : ಚಿಕ್ಕಮಗಳೂರು : ಟಿಪ್ಪರ್ ಚಾಲಕನ ಅಜಾಗರೂಕತೆಗೆ ಅಮಾಯಕ ಜೀವ ಬಲಿ

Advertisement

Udayavani is now on Telegram. Click here to join our channel and stay updated with the latest news.

Next