Advertisement

Nanjangud: ಶಾಸಕರ ಸಮ್ಮುಖದಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

05:48 PM Jan 27, 2024 | Team Udayavani |

ನಂಜನಗೂಡು: ಬಿಜೆಪಿ ಹಿರಿಯ ಮುಖಂಡ ಹಾಗು ಹುಲ್ಲಹಳ್ಳಿ ಹಾಲು ಉತ್ಪಾದಕ ಸಹಾಕರ ಸಂಘದ ಅಧ್ಯಕ್ಷರಾದ ಮಂಜುನಾಥ ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಸಂತಸ ವಿಚಾರ ಎಂದು ಶಾಸಕ ದರ್ಶನ್ ಧೃವನಾರಾಯಣ್ ಸಂತಸ ವ್ಯಕ್ತಪಡಿಸಿದರು.

Advertisement

ಅವರು ಶನಿವಾರ ನಗರದ ಪ್ರವಾಸಿ ಮಂದಿರದಲ್ಲಿ ಬಿಜೆಪಿಯಿಂದ ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ನೂತನ ಸದಸ್ಯರನ್ನು ಪಕ್ಷದ ಶಾಲು ಹೊದಿಸಿ ಪಕ್ಷಕ್ಕೆ ಬರಮಾಡಿಕೊಂಡರು ಈ ಸಂದರ್ಭದಲ್ಲಿ ಕೆ ಆರ್ ನಗರ ಶಾಸಕರಾದ ರವಿಕುಮಾರ್ ಹಾಜರಿದ್ದರು ನಂತರ ಮಾತಾನಾಡಿದ ಶಾಸಕರು ಶನಿವಾರ ನಡೆದಂತಹ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿರುವ ಮಂಜುನಾಥ್ ರವರು ತಮ್ಮ ಸದಸ್ಯರೊಂದಿಗೆ ಯಾವುದೇ ಶರತ್ ಇಲ್ಲದೆ ಅಥವಾ ಬೇಡಿಕೆಗಳಿಲ್ಲದೆ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿಕೊಂಡು ಕಾಂಗ್ರೆಸ್ ಪಕ್ಷಕ್ಕೆ ಬಂದಿರುವುದು ಸ್ವಾಗತ ಹಾಗೂ ಅವರಿಗೆ ಅಭಿನಂದನೆಗಳು. ಅವರು ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ಉಳ್ಳಳ್ಳಿ ಭಾಗದಲ್ಲಿ ಆನೆ ಬಲ ಬಂದಂತಾಗಿದೆ ಅಲ್ಲದೆ ನಮ್ಮ ಯೋಜನೆಗಳನ್ನು ಮತ್ತಷ್ಟು ಸಾರ್ವಜನಿಕರಿಗೆ ತಲುಪಿಸುವಲ್ಲಿ ಸಹಕಾರಿ ಯಾಗುತ್ತದೆ ಇನ್ನು ಹೆಚ್ಚು ಹೆಚ್ಚು ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಳ್ಳಬೇಕು.

ನೂತನ ಅಧ್ಯಕ್ಷರಾದ ಮಂಜುನಾಥ್ ರವರು ತಮ್ಮ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರುಗಳು ನಿರ್ದೇಶಕರು ಪಕ್ಷಕ್ಕೆ ಸೇರ್ಪಡೆಗೊಂಡರು.

Advertisement

Udayavani is now on Telegram. Click here to join our channel and stay updated with the latest news.

Next