Advertisement

Nanjangud ವಾಂತಿಭೇದಿ ಪ್ರಕರಣ: ಎಂಜಿನಿಯರ್‌ ಅಮಾನತು

11:42 PM May 23, 2024 | Team Udayavani |

ಬೆಂಗಳೂರು: ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ತಗಡೂರು ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ 122 ಮಂದಿ ವಾಂತಿಭೇದಿಯಿಂದ ಬಳಲಿದ ಪ್ರಕರಣಕ್ಕೆ ಸಂಬಂಧಿಸಿ ಅಧಿಕಾರಿಯೊಬ್ಬರ ತಲೆದಂಡವಾಗಿದೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ನಂಜನಗೂಡು ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಶಿವಕುಮಾರ್‌ ಅವರನ್ನು ಅಮಾನತುಗೊಳಿಸಿ ಸರಕಾರ ಆದೇಶ ಹೊರಡಿಸಿದೆ.

Advertisement

ಮೈಸೂರು ಜಿ.ಪಂ. ಸಿಇಒ ವರದಿ ಆಧರಿಸಿ ಶಿವಕುಮಾರ್‌ ಅವರನ್ನು ಅಮಾನತುಗೊಳಿ ಸಲಾಗಿದೆ. ಗ್ರಾಮದಲ್ಲಿ ಕಲುಷಿತ ನೀರಿನಿಂದ ವಾಂತಿಭೇದಿ ಪ್ರಕರಣಗಳು ವರದಿಯಾಗಿವೆ. ಶಿವಕುಮಾರ್‌ ಕರ್ತವ್ಯಲೋಪ ಎಸಗಿದ್ದಾರೆ. ಅವರನ್ನು ಅಮಾನುತಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಆದೇಶದಲ್ಲಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next