Advertisement

ನಂಜನಗೂಡು: ಕಣದಿಂದ JDS ದೂರ?

09:34 PM Apr 07, 2023 | Team Udayavani |

ಮೈಸೂರು: ನಂಜನಗೂಡು (ಪರಿಶಿಷ್ಟ ಜಾತಿ ಮೀಸಲು) ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ದರ್ಶನ್‌ ಧ್ರುವ ನಾರಾಯಣ್‌ ವಿರುದ್ಧ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೇ? ಬೇಡವೇ? ಎಂಬ ಕುರಿತು ಜಾತ್ಯತೀತ ಜನತಾದಳ ಗಂಭೀರ ಚಿಂತನೆ ನಡೆಸಿದೆ. ಮಾಜಿ ಸಂಸದ ಆರ್‌. ಧ್ರುವನಾರಾ ಯಣ್‌ ಕಳೆದ ತಿಂಗಳು ನಿಧನರಾದರು. ಅವರು ನಂಜನಗೂಡು ಕ್ಷೇತ್ರದಲ್ಲಿ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಅವರ ನಿಧನದ ನಂತರ ಪುತ್ರ ದರ್ಶನ್‌ಗೆ ಕಾಂಗ್ರೆಸ್‌ ಟಿಕೆಟ್‌ ಘೋಷಿಸಿದೆ. ಧ್ರುವನಾರಾಯಣ ಪತ್ನಿ ವೀಣಾ ಅವರು ಅನಾರೋಗ್ಯದಿಂದ ಶುಕ್ರವಾರ ಕೊನೆಯುಸಿರೆಳೆದರು. ಈ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ದರ್ಶನ್‌ ವಿರುದ್ಧ ಜೆಡಿಎಸ್‌ ಅಭ್ಯರ್ಥಿಯನ್ನು ಕಣಕ್ಕಿಳಿಸಬಾರದು ಎಂಬುದು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್‌ ಶಾಸಕ ಜಿ.ಟಿ. ದೇವೇಗೌಡರ ಅಭಿಪ್ರಾಯವಾಗಿದೆ. ಈ ಕುರಿತು ಅವರು ಜೆಡಿಎಸ್‌ ನಾಯಕ ಎಚ್‌. ಡಿ. ಕುಮಾರಸ್ವಾಮಿ ಜತೆ ಚರ್ಚಿಸಿದ್ದು, ಜೆಡಿಎಸ್‌ನಲ್ಲಿ ಈ ಕುರಿತು ಈಗ ಗಂಭೀರ ಚಿಂತನೆ ನಡೆದಿದೆ ಎನ್ನಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next