Advertisement

ಬಸವಸಾಗರ ಜಲಾಶಯದಿಂದ 1.85 ಲಕ್ಷ ಕ್ಯೂಸೆಕ್‌ ನೀರು ನದಿಗೆ

05:13 PM Sep 06, 2019 | Naveen |

ನಾರಾಯಣಪುರ: ಬಸವಸಾಗರ ಜಲಾಶಯದ 18 ಕ್ರಸ್ಟ್‌ಗೇಟ್ ತೆರೆದು ಗುರುವಾರ ಸಂಜೆ 1.85 ಲಕ್ಷ ಕ್ಯೂಸೆಕ್‌ ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗಿದೆ. ಗುರುವಾರ ಸಂಜೆ 7:00ಕ್ಕೆ ಒಳಹರಿವು 1.80 ಲಕ್ಷ ಕ್ಯೂಸೆಕ್‌ ಏರಿಕೆಯಾದ ಹಿನ್ನೆಲೆಯಲ್ಲಿ ಜಲಾಶಯ ಗರಿಷ್ಠ ಮಟ್ಟಕ್ಕೂ ಮೀರಿ ಬರುತ್ತಿರುವ ಹೆಚ್ಚುವರಿ ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗುತ್ತಿದೆ ಎಂದು ಅಣೆಕಟ್ಟು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್‌ ಶಂಕರ ನಾಯ್ಕೋಡಿ ತಿಳಿಸಿದ್ದಾರೆ.

Advertisement

ಮಹಾರಾಷ್ಟದ ಕೋಯ್ನಾ, ಕೃಷ್ಣಾ ಹಾಗೂ ಅದರ ಉಪನದಿಗಳಾದ ವೇದಗಂಗಾ, ದೂದಗಂಗಾ ಸೇರಿದಂತೆ ರಾಜ್ಯದ ಘಟಪ್ರಭಾ, ಮಲಪ್ರಭಾ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನದಿಗಳು ಉಕ್ಕಿ ಹರಿಯುತ್ತಿವೆ. ಹೀಗಾಗಿ ಕೃಷ್ಣಾ ನದಿ ತುಂಬಿ ಹರಿಯುತ್ತಿರುವ ಪರಿಣಾಮ ಆಲಮಟ್ಟಿ, ನಾರಾಯಣಪುರ ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿದೆ. ಈಗಾಗಲೇ ಎರಡು ಜಲಾಶಯಗಳು ಸಂಪೂರ್ಣ ಭರ್ತಿಯಾಗಿವೆ. ಅಣೆಕಟ್ಟುಗಳ ಗರಿಷ್ಠ ಮಟ್ಟಕ್ಕಿಂತಲೂ ಹೆಚ್ಚಾಗಿ ಬರುತ್ತಿರುವ ಹಿನ್ನೀರನ್ನು ಕೃಷ್ಣಾ ನದಿ ಪಾತ್ರಕ್ಕೆ ಹರಿಬಿಡಲಾಗುತ್ತಿದೆ. ನಾಳೆವರೆಗೆ ಜಲಾಶಯಕ್ಕೆ ಒಳಹರಿವು ಇನ್ನೂ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.

ಪ್ರವಾಹ ಮುನ್ಸೂಚನೆ: ಬಸವಸಾಗರಕ್ಕೆ ಒಳಹರಿವು ಏರಿಕೆಯಾಗಿದ್ದರಿಂದ ಜಲಾಶಯಕ್ಕೆ ಹೆಚ್ಚುವರಿಯಾಗಿ ಬರುವ ಅಷ್ಟು ನೀರನ್ನು ನದಿ ಪಾತ್ರಕ್ಕೆ ಹರಿಸಲಾಗುತ್ತಿದೆ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ನದಿಗೆ ನೀರು ಬಿಡುವ ಬಗ್ಗೆ ನಿರಂತರವಾಗಿ ಮಾಹಿತಿ ರವಾನಿಸುತ್ತಿದ್ದೇವೆ. ನದಿ ತೀರದ ಗ್ರಾಮಗಳ ಜನ, ಜಾನುವಾರುಗಳು ನೀರಿಗೆ ಇಳಿಯದಂತೆ ಮುನ್ನೆಚ್ಚರಿಕೆ ವಹಿಸಬೇಕು. ಅಲ್ಲದೇ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಕಾರ್ಯನಿರ್ವಾಹಕ ಇಂಜಿನಿಯರ್‌ ಶಂಕರ ನಾಯ್ಕೋಡಿ ಮನವಿ ಮಾಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next