Advertisement

ನಾರಾಯಣಸ್ವಾಮಿ ಬಂಧನ ಖಚಿತ

06:10 AM Feb 22, 2018 | Team Udayavani |

ವಿಧಾನಸಭೆ: ಕೆ.ಆರ್‌.ಪುರದ ಬಿಬಿಎಂಪಿ ಕಚೇರಿಗೆ ನುಗ್ಗಿ ಪೆಟ್ರೋಲ್‌ ಎರಚಿ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ ಮಾಜಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ನಾರಾಯಣಸ್ವಾಮಿಯನ್ನು ಎಲ್ಲಿ ಅಡಗಿದ್ದರೂ ಬಂಧಿಸಲಾಗುವುದೆಂದು ಗೃಹ ಸಚಿವ ರಾಮಲಿಂಗಾರೆಡ್ಡಿ ವಿಧಾಸನಸಭೆಗೆ ತಿಳಿಸಿದ್ದಾರೆ.

Advertisement

ಬುಧವಾರ ಸದನದಲ್ಲಿ ಪ್ರತಿಪಕ್ಷ ನಾಯಕ ಜಗದೀಶ್‌ ಶೆಟ್ಟರ್‌ ಅವರು ಕಾಂಗ್ರೆಸ್‌ ಮುಖಂಡ ನಾರಾಯಣಸ್ವಾಮಿ
ಪ್ರಕರಣ ಪ್ರಸ್ತಾಪಿಸಿದ್ದಕ್ಕೆ ಸಚಿವರು ಪ್ರತಿಕ್ರಿಯಿಸಿ ಉತ್ತರಿಸಿದರು. ನಾರಾಯಣ ಸ್ವಾಮಿ ಕಾನೂನು ಪ್ರಕಾರ ತಪ್ಪು ಮಾಡಿದ್ದಾರೆ.

ಬಿಬಿಎಂಪಿ ಕಚೇರಿಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿರುವುದನ್ನು ಸಮರ್ಥಿಸಲು ಸಾಧ್ಯವಿಲ್ಲ. ಯಾವ ಪಕ್ಷದವರು ಮಾಡಿದರೂ ತಪ್ಪು ತಪ್ಪೇ ಎಂದರು.ನಾರಾಯಣಸ್ವಾಮಿಯನ್ನು ಎಲ್ಲಿದ್ದರೂ ಬಂಧಿಸುವಂತೆ ಪೊಲೀಸ್‌ ಆಯುಕ್ತರಿಗೆ
ತಿಳಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next