Advertisement

ಮಾದಕ ದ್ರವ್ಯ ಗಾಂಜಾ ಪ್ರಕರಣ: 9 ಮಂದಿ ಬಂಧನ

05:10 PM Aug 01, 2023 | Team Udayavani |

ಕಾರ್ಕಳ: ಮಾದಕ ವಸ್ತು ಗಾಂಜಾ ಸೇವನೆ ಹಾಗೂ ಮಾರಾಟ ಮಾಡುತಿದ್ದವಿಚಾರಕ್ಕೆ ಸಂಬಂದಿಸಿ ಪ್ರತ್ಯೇಕ ಪ್ರಕರಣಗಳಲ್ಲಿ 9 ಮಂದಿಯನ್ನು ಕಾರ್ಕಳ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisement

ಕಾರ್ಕಳ ಕಸಬಾ ಗ್ರಾಮದ ಗಾಂಧಿ ಮೈದಾನದ ಸಮೀಪ ರಸ್ತೆ ಬಳಿ ತೆಳ್ಳಾರು ನಿವಾಸಿ ಭುವನೇಶ (27) ಮತ್ತು ಕಸಬಾ ಗ್ರಾಮ ಜರಿಗುಡ್ಡೆಯ ಶ್ರೀಕಾಂತ (23) ಕಾರ್ಕಳ ಕಸಬಾ ಗ್ರಾಮದ ಬಂಗ್ಲೆಗುಡ್ಡೆ ಮಟನ್‌ ಸ್ಟಾಲ್‌ ಸಮೀಪ ಕಿರಣ, ನಜೀರ್‌ ಸಾಬ್‌ ಮತ್ತು ಅಭಯ್‌ ಎಂಬವರನ್ನು ಗಾಂಜಾ ಸೇವನೆ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ.

ಸಾರ್ವಜನಿಕ ಸ್ಥಳದಲ್ಲಿ ಗಾಂಜಾವನ್ನು ಸಿಗರೇಟು ಮಾದರಿ ಸುರುಳಿ ಸುತ್ತಿ ಸೇದುತ್ತಿದ್ದರು ಹಾಗೂ ಮಾರಾಟ ಮಾಡುತ್ತಿದ್ದರು. ಮಿಯ್ಯಾರು ಗ್ರಾಮದ ಕಾರೋಲ್ಗುಡ್ಡೆ ಬಳಿ ಕರೋಲ್ಗುಡ್ಡೆಯ ನರೇಂದ್ರ (40), ಸಾಣೂರು ಗ್ರಾಮದ ಸಿರಾಜ್‌ (21) ಮತ್ತು ದುರ್ಗ ಗ್ರಾಮ ತೆಳ್ಳಾರು ಮೇಲಿನಪಲೆಯ ಅಬ್ದುಲ್‌ ಆರೀಫ್ (26) ಕೌಡೂರಿನ ಜೀವನ (25) ಎಂಬವರನ್ನು ಗಾಂಜಾ ಮಾರಾಟದ ಹಿನ್ನೆಲೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತರಿಂದ 194 ಗ್ರಾಂ ಮಾದಕ ವಸ್ತು ಗಾಂಜಾದ ಹಸಿ ಹೂವುಗಳು, ತೆನೆಗಳು, ಬೀಜ, ಎಲೆಗಳು, ಗಾಂಜಾ ಮಾರಾಟ ಮಾಡಿ ಗಳಿಸಿದ 1,500 ರೂ. ಮೋಟಾರ್‌ ಸೈಕಲ್‌ ವಶಕ್ಕೆ ಪಡೆಯಲಾಗಿದೆ.

ವಶಕ್ಕೆ ಪಡೆದ ಒಟ್ಟು ಗಾಂಜಾದ ಮೌಲ್ಯ 10,500 ರೂ. ನಗದು 1,800 ರೂ. ಹಾಗೂ ಬೈಕ್‌ ಅನ್ನು ಪೊಲೀಸರು ವಶಪಡಿಸಿಕೊಂಡಿರುತ್ತಾರೆ. ಕಾರ್ಕಳ ನಗರ ಠಾಣೆ ಎಸ್‌ಐ ಸಂದೀಪ್‌ ಶೆಟ್ಟಿ ನೇತೃತ್ವದಲ್ಲಿ ದಾಳಿ ನಡದಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next