Advertisement

ನರೇಗಾ ವ್ಯಾಪಕ ಪ್ರಚಾರ ಮಾಡಿ

09:21 AM Jun 08, 2020 | Suhan S |

ಧಾರವಾಡ: ನರೇಗಾ ಕುರಿತು ಎಲ್ಲ ಗ್ರಾಮಗಳಲ್ಲಿ ವ್ಯಾಪಕ ಪ್ರಚಾರ ಮಾಡಿ ಎಂದು ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ ತಿಳಿಸಿದರು.

Advertisement

ಕೋವಿಡ್‌ ಸಂದರ್ಭದಲ್ಲಿ ಗ್ರಾಮೀಣ ಜನರ ನೋವಿಗೆ ಸ್ಪಂದಿಸಲು ವಿಶೇಷ ಚಟುವಟಿಕೆ ಕೈಗೊಂಡ ಕುರಿತ ಭಿತ್ತಿಚಿತ್ರ ಬಿಡುಗಡೆ ಮಾಡಿ ಅವರು ಮಾತನಾಡಿದರು. ನರೇಗಾ ಕುರಿತು ತಿಳಿವಳಿಕೆ ಮೂಡಿಸುವುದರ ಜತೆಗೆ ಗ್ರಾಮೀಣ ಜನರಿಗೆ ಹೆಚ್ಚೆಚ್ಚು ಉದ್ಯೋಗ ಒದಗಿಸಬೇಕು. ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ರೈತರಿಗೆ ಪೂರಕ ಚಟುವಟಿಕೆ ಕೈಗೆತ್ತಿಕೊಳ್ಳಬೇಕೆಂದರು. ಉಪಾಧ್ಯಕ್ಷ ಶಿವಾನಂದ ಕರಿಗಾರ ಮಾತನಾಡಿ, ಪ್ರಸ್ತುತ ಕೋವಿಡ್‌-19 ಹಿನ್ನೆಲೆಯಲ್ಲಿ ಬೇರೆ ಬೇರೆ ಜಿಲ್ಲೆ ಮತ್ತು ರಾಜ್ಯಗಳಲ್ಲಿ ಉದ್ಯೋಗ ಅರಸಿ ಹೋದ ಜನರು ಪುನಃ ತಮ್ಮ ಸ್ವಗ್ರಾಮಗಳಿಗೆ ಬಂದಿದ್ದು, ಅವರಿಗೆ ಅವರ ಗ್ರಾಮಗಳಲ್ಲೇ ಉದ್ಯೋಗ ಒದಗಿಸುವ ಸಲುವಾಗಿ ಗ್ರಾಪಂಗಳಿಂದ ಉದ್ಯೋಗ ಚೀಟಿಗಳನ್ನು ಒದಗಿಸಲಾಗಿದೆ ಎಂದರು.

ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ|ಬಿ.ಸಿ.ಸತೀಶ ಮಾತನಾಡಿ, ಮಾಹಿತಿ ಶಿಕ್ಷಣ ಮತ್ತು ಸಂವಹನ ಚಟುವಟಿಕೆಗಳ ಅಡಿಯಲ್ಲಿ ವಿವಿಧ ಏಳು ರೀತಿಯ ಪೋಸ್ಟರ್‌ಗಳನ್ನು ಮುದ್ರಿಸಿ ಗ್ರಾಪಂಗಳ ವ್ಯಾಪ್ತಿಯ ಗ್ರಾಪಂ ಸೇರಿ ಇತರೆ ಎಲ್ಲ ಕಚೇರಿಗಳಲ್ಲಿ ಪ್ರಚಾರ ಮಾಡಲಾಗುತ್ತಿದೆ ಎಂದರು. ಜಿಪಂ ಉಪ ಕಾರ್ಯದರ್ಶಿ, ಮುಖ್ಯ ಯೋಜನಾಧಿಕಾರಿ, ಸಹಾಯಕ ಕಾರ್ಯದರ್ಶಿಗಳು ಮತ್ತು ಸಿಬ್ಬಂದಿ ವರ್ಗದವರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next