Advertisement

ಸಮರ್ಪಕ ನೀರು ಪೂರೈಸಲು ಜಿಲ್ಲಾಧಿಕಾರಿ ಸೂಚನೆ

03:22 PM Apr 16, 2020 | Naveen |

ನರೇಗಲ್ಲ: ಸ್ಥಳೀಯ ಪಪಂ ಕಾರ್ಯಾಲಯಕ್ಕೆ ಸೋಮವಾರ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಭೇಟಿ ನೀಡಿ, ಕುಡಿಯುವ ನೀರು ಮತ್ತು ಬಹುಗ್ರಾಮ ಕುಡಿಯುವ ನೀರು ಸರಬರಾಜು ಮಾಡುವ ಬಗ್ಗೆ ಹಾಗೂ ಕೋವಿಡ್ ವೈರಸ್‌ ಹರಡದಂತೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.

Advertisement

ಈ ವೇಳೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಮುಖ್ಯಾಧಿಕಾರಿ ಎಂ.ಎ. ನುರಾಲ್ಲಾಖಾನ ಅವರನ್ನು ತರಾಟೆಗೆ ತಗೆದುಕೊಂಡು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಪಟ್ಟಣದ ಜನತೆಗೆ ಕುಡಿಯುವ ನೀರು ಸಮರ್ಪಕವಾಗಿ ದೊರೆಯುತ್ತಿಲ್ಲ. ಮೇಲಿಂದ ಮೇಲೆ ಜಿಲ್ಲಾದಳಿತ ಕಚೇರಿಗೆ ದೂರುಗಳು ಬರುತ್ತಿವೆ. ಈಗಾಗಲೇ ಜಿಲ್ಲಾಡಳಿತದಿಂದ ಕುಡಿಯುವ ನೀರಿನ ಯೋಜನೆಗೆ ಕೋಟ್ಯಂತರ ರೂ. ಅನುದಾನ ಬಿಡುಗಡೆ ಮಾಡುತ್ತಿದೆ. ಸಮರ್ಪಕವಾಗಿ ಬಳಕೆ ಮಾಡಬೇಕು. ಪಟ್ಟಣದ ಜನತೆಗೆ ಕುಡಿಯುವ ನೀರು ಸರಬರಾಜು ಮಾಡುವಲ್ಲಿ ನಿರ್ಲಕ್ಷ್ಯ
ಧೋರಣೆ ಸಲ್ಲದು. ಕೂಡಲೇ ಪಟ್ಟಣದಲ್ಲಿರುವ ಖಾಸಗಿ ಕೊಳವೆ ಬಾವಿಗಳ ಮಾಲೀಕರ ಸಭೆ ನಡೆಸಿ, ಅವರಿಂದ ಕೊಳವೆಬಾವಿಗಳನ್ನ ಬೇಸಿಗೆ ಮುಗಿಯುವರೆಗೂ ಇಲಾಖೆಗೆ ಪಡೆದುಕೊಳ್ಳಿ. ಅದಕ್ಕೆ ಅನುದಾನವನ್ನು ನೀಡುವುದಕ್ಕೆ ಜಿಲ್ಲಾಡಳಿತ ಸನ್ನದ್ಧವಾಗಿದೆ. ಅಲ್ಲದೇ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ವಾರದೊಳಗೆ ಸರಬರಾಜು ನೀರು ಮಾಡುವಂತೆ ಡಿಬಿಟಿಒ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next