Advertisement

ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರಿಗೆ ಕರೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

08:08 AM Apr 24, 2020 | keerthan |

ಶಿವಮೊಗ್ಗ: ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

Advertisement

ಗುರುವಾರ ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರಿಗೆ ಕರೆ ಮಾಡಿದ ಪ್ರಧಾನಿ ಮೋದಿ ಲಾಕ್ ಡೌನ್ ಅವಧಿಯಲ್ಲಿ ಹೇಗೆ ಸಮಯ ಕಳೆಯುತ್ತಿದ್ದೀರಿ ಎಂದು ಕೇಳಿದರು. ಇದಕ್ಕೆ ಉತ್ತರಿಸಿ ಶಂಕರ ಮೂರ್ತಿ,ಲಾಕ್ ಡೌನ್ ಹಿನ್ನೆಲೆಯಲ್ಲಿ ಮನೆಯಲ್ಲೇ ಇದ್ದು, ಫೋನ್ ಮೂಲಕವೇ ಕೆಲಸ ಮಾಡುತ್ತಿರುವುದಾಗಿ ಪ್ರಧಾನಿಗೆ ಮಾಹಿತಿ ನೀಡಿದರು.

ಒಂದೂವರೆ ನಿಮಿಷಗಳ ಕಾಲ ಶಂಕರಮೂರ್ತಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ‌ ಮೋದಿ, ಶಂಕರಮೂರ್ತಿ ಅವರಿಗೆ ಆರೋಗ್ಯ ಕಾಪಾಡಿಕೊಳ್ಳುವಂತೆ ಸಲಹೆ ನೀಡಿದರು. ಇದರೊಂದಿಗೆ ನಿಮ್ಮ ರಾಜಕೀಯ ಅನುಭವ ಹಾಗೂ ಪಕ್ಷ‌ ಸಂಘಟನೆಯ ಅನುಭವವನ್ನು ಬೇರೆಯವರಿಗೂ ತಿಳಿಸುವಂತೆ ಸಲಹೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next