Advertisement

NDA ನಾಯಕನಾಗಿ ನರೇಂದ್ರ ಮೋದಿ ಅವಿರೋಧ ಆಯ್ಕೆ, ನಾಡಿದ್ದು ಪಟ್ಟಾಭಿಷೇಕ?

10:42 PM Jun 05, 2024 | Team Udayavani |

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ 292 ಕ್ಷೇತ್ರಗಳನ್ನು ಗೆದ್ದಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ರಚಿಸಲು ಮುಂದಾಗಿದ್ದು, ಎನ್‌ಡಿಎ ನಾಯಕರು ನರೇಂದ್ರ ಮೋದಿ ಅವರನ್ನು ತಮ್ಮ ನಾಯಕನನ್ನಾಗಿ ಬುಧವಾರ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಪ್ರಧಾನಿಯಾಗಿ 3ನೇ ಬಾರಿಗೆ ಮೋದಿ ಅಧಿಕಾರ ಸ್ವೀಕರಿಸುವ ಸಾಧ್ಯತೆಗಳಿವೆ. ಇದರೊಂದಿಗೆ, ಮೋದಿ ಅವರು ಪ್ರಥಮ ಪ್ರಧಾನಿ ಪಂಡಿತ ಜವಾಹರ್‌ ಲಾಲ್‌ ನೆಹರು ಅವರ ದಾಖಲೆಯನ್ನು ಸರಿಗಟ್ಟಲಿದ್ದಾರೆ!

Advertisement

ಬುಧವಾರ ನರೇಂದ್ರ ಮೋದಿ ಅವರ ದಿಲ್ಲಿಯ ನಿವಾಸದಲ್ಲಿ ಎನ್‌ಡಿಎ ನಾಯಕ ಸಭೆ ನಡೆಯಿತು. ದೇಶದ ಒಳತಿಗಾಗಿ ಕೆಲಸ ಮಾಡುವ ಕುರಿತು ನಿರ್ಣಯವನ್ನು ಈ ವೇಳೆ ಅಂಗೀಕರಿಸಲಾಯಿತು. ಅಲ್ಲದೇ, ಸರ್ಕಾರ ರಚನೆ ಕುರಿತು 12 ಸ್ಥಾನ ಗೆದ್ದಿರುವ ಜೆಡಿಯು ಮತ್ತು 16 ಸ್ಥಾನ ಗೆದ್ದಿರುವ ಟಿಡಿಪಿ ನಾಯಕರು ತಮ್ಮ “ಬೆಂಬಲ ಪತ್ರ’ಗಳನ್ನು ನೀಡಿದ್ದಾರೆಂದು ತಿಳಿದು ಬಂದಿದೆ.

“ಶುಕ್ರವಾರ ಮತ್ತೆ ಎನ್‌ಡಿಎ ಎಲ್ಲ ಸಂಸದರು ಸಭೆ ಸೇರಿ ಮೋದಿ ಅವರನ್ನು ಔಪಚಾರಿಕವಾಗಿ ಸಂಸದೀಯ ನಾಯಕನನ್ನಾಗಿ ಆಯ್ಕೆ ಮಾಡಲಿದ್ದಾರೆ. ಬಳಿಕ ಎನ್‌ಡಿಎ ನಾಯಕರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, ಸರ್ಕಾರ ರಚನೆಯ ಹಕ್ಕು ಮಂಡಿಸಲಿದ್ದಾರೆ” ಎಂದು ಸಭೆಯಲ್ಲಿ ಭಾಗಿಯಾಗಿದ್ದ ಎಚ್‌ಎಎಂ ನಾಯಕ ಜಿತನ್‌ ರಾಮ್‌ ಮಾಂಜಿØ ಹೇಳಿದ್ದಾರೆ. ಮೂಲಗಳ ಪ್ರಕಾರ, ಪ್ರಧಾನಿ ಮೋದಿ ಶನಿವಾರ ಅಧಿಕಾರ ಸ್ವೀಕರಿಸಲಿದ್ದಾರೆ.

ಬಗೆ ಹರಿದ ಗೊಂದಲ:
ಮಂಗಳವಾರ ಚುನಾವಣೆ ಫ‌ಲಿತಾಂಶ ಪ್ರಕಟವಾದ ಬಳಿಕ 234 ಸ್ಥಾನಗಳನ್ನು ಗೆದ್ದ ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಒಕ್ಕೂಟವು ಸರ್ಕಾರ ರಚಿಸುವ ದಾವೆ ಮಾಡಿತ್ತು. ಹಾಗಾಗಿ ಸಾರ್ವಜನಿಕರಲ್ಲಿ ಗೊಂದಲ ಉಂಟಾಗಿತ್ತು. ಆದರೆ, ಬುಧವಾರ ಎಲ್ಲ ಗೊಂದಲ ದೂರಾಗಿದ್ದು, ಎನ್‌ಡಿಎ 3ನೇ ಅವಧಿಗೆ ಸರ್ಕಾರ ರಚಿಸುವುದು ನಿಕ್ಕಿಯಾಗಿದೆ.

ಸಭೆಯಲ್ಲಿ ಏನೇನಾಯ್ತು?
ಮೋದಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಎನ್‌ಡಿಎ ನಾಯಕರು ಬಡವರು, ಮಹಿಳೆಯರು, ಯುವಕರು, ರೈತರು ಮತ್ತು ಸಮಾಜದಲ್ಲಿ ಹಿಂದುಳಿದವರ ಕಲ್ಯಾಣಕ್ಕಾಗಿ ಕೆಲಸ ಮಾಡುವ ನಿರ್ಣಯವನ್ನು ಕೈಗೊಂಡರು. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕ್ವತದಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ 2024ರ ಲೋಕಸಭೆ ಚುನಾವಣೆಯಲ್ಲಿ ಹೋರಾಡಿ, ಗೆದ್ದಿದ್ದೇವೆ. ಇದಕ್ಕಾಗಿ ಹೆಮ್ಮೆ ಪಡುತ್ತೇವೆ. ನಾವು ಎನ್‌ಡಿಎ ನಾಯಕರು ಎಲ್ಲರೂ ನರೇಂದ್ರ ಮೋದಿ ಅವರನ್ನು ಅವಿರೋಧವಾಗಿ ನಾಯಕನನ್ನಾಗಿ ಆಯ್ಕೆ ಮಾಡುತ್ತಿದ್ದೇವೆ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.

Advertisement

ಎನ್‌ಡಿಎ ಯಾರ್ಯಾರು ಭಾಗಿಯಾಗಿದ್ದರು?
ಟಿಡಿಪಿ ನಾಯಕ ನಾಯಕ ಚಂದ್ರಬಾಬು ನಾಯ್ಡು, ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂಧೆ, ಮಾಜಿ ಸಿಎಂ ಕುಮಾರಸ್ವಾಮಿ, ಎಲ್‌ಜೆಪಿ(ಆರ್‌) ನಾಯಕ ಚಿರಾಗ್‌ ಪಾಸ್ವಾನ್‌, ಎನ್‌ಸಿಪಿ ನಾಯಕ ಪ್ರಫ‌ುಲ್‌ ಪಟೇಲ್‌ 21 ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು. ಇವರ ಜತೆಗೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ನಾಯಕರಾದ ಅಮಿತ್‌ ಶಾ, ರಾಜನಾಥ್‌ ಸಿಂಗ್‌ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next