Advertisement

ನರೇಂದ್ರ‌ ಮೋದಿಯವರು ಪ್ರಪಂಚ ಮೆಚ್ಚುವ ಆಡಳಿತ ನಡೆಸುತ್ತಿದ್ದಾರೆ: ಸಿಎಂ ಯಡಿಯೂರಪ್ಪ

03:40 PM Oct 25, 2020 | keerthan |

ಶಿವಮೊಗ್ಗ: ಶಿರಾ ಹಾಗೂ ಆರ್ ಆರ್ ನಗರ ಉಪ ಚುನಾವಣೆ ಮಾತ್ರವಲ್ಲದೆ ಮುಂದಿನ ಎಲ್ಲಾ ಚುನಾವಣೆಯಲ್ಲೂ ನಾವೇ ಗೆಲ್ಲುತ್ತೇವೆ. ನರೇಂದ್ರ‌ ಮೋದಿಯವರು ಪ್ರಪಂಚ ಮೆಚ್ಚುವಂತಹ ಆಡಳಿತವನ್ನು ನೀಡುತ್ತಿದ್ದಾರೆ. ಮತ್ತೆ ನರೇಂದ್ರ ಮೋದಿಯವರೇ ಪ್ರಧಾನಿಯಾಗುತ್ತಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

Advertisement

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ‌ ಹಿಂದೆಂದೂ ಕಂಡರಿಯದ ಪ್ರವಾಹ ಬಂದಿದೆ. ಬೆಂಗಳೂರಿನಲ್ಲಿಯೂ ಭಾರಿ ಮಳೆಯಾಗಿ ಮನೆಗಳು ಜಲಾವೃತವಾಗಿವೆ. ನಾನು 600ಕ್ಕೂ ಹೆಚ್ಚು ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಯಾವ ಮನೆಗಳಿಗೆ ನೀರು ನುಗ್ಗಿದೆಯೋ ಅವರಿಗೆ 25 ಸಾವಿರ ಪರಿಹಾರ ನೀಡಲು ಸೂಚಿಸಿದ್ದೇನೆ. ನಿನ್ನೆ ಸಂಜೆಯಿಂದಲೇ ಪರಿಹಾರ ನೀಡುವ ಕಾರ್ಯ ಆರಂಭಗೊಂಡಿದೆ ಎಂದರು.

ಇದನ್ನೂ ಓದಿ:ಹಬ್ಬದ ಪ್ರಯುಕ್ತ ಸೈನಿಕರಿಗಾಗಿ ಮನೆಗಳಲ್ಲಿ ದೀಪ ಬೆಳಗಿ: ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಸಿಎಂ ಯಡಿಯೂರಪ್ಪ, ನವೆಂಬರ್ 17ರಿಂದ ರಾಜ್ಯದಲ್ಲಿ ಇಂಜಿನಿಯರಿಂಗ್ ಹಾಗೂ ಮೆಡಿಕಲ್ ಕಾಲೇಜುಗಳನ್ನು ಆರಂಭಿಸುತ್ತೇವೆ. ಯಾರಿಗೆ ಆಸಕ್ತಿ ಇದೆಯೋ ಅವರು ಕಾಲೇಜಿಗೆ ಬರಬಹುದು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next