Advertisement

ಮೋದಿ, ಶಾ  ಸಂರಕ್ಷಿತ ಅರಣ್ಯದಲ್ಲಿ ಓಡಾಡಲಿ:ದಿನೇಶ್‌ ಗುಂಡೂರಾವ್‌

06:20 AM Jan 27, 2018 | Team Udayavani |

ಬೆಂಗಳೂರು: ರಾಜ್ಯದಲ್ಲಿ ಹುಲಿ ಸಂರಕ್ಷಿತ ಅರಣ್ಯ ಯೋಜನೆ ಜಾರಿಯಲ್ಲಿದೆ. ಬಂಡೀಪುರ, ನಾಗರಹೊಳೆ, ದಾಂಡೇಲಿ, ಬನ್ನೇರುಘಟ್ಟ ರಾಷ್ಟ್ರೀಯ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಹಾಗೂ ಪ್ರಧಾನಿ ತಿರುಗಾಡಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ವ್ಯಂಗ್ಯವಾಡಿದ್ದಾರೆ.

Advertisement

ಮೈಸೂರಿನ ಬಿಜೆಪಿ ಕಾರ್ಯಕ್ರಮದಲ್ಲಿ ಅಮಿತ್‌ ಶಾ ಹಾಗೂ ಪ್ರಧಾನಿ ಮೋದಿಯನ್ನು ಹುಲಿ,ಸಿಂಹಕ್ಕೆ ಹೋಲಿಕೆ ಮಾಡಿರುವುದಕ್ಕೆ ತಿರುಗೇಟು ನೀಡಿರುವ‌ ಅವರು, ಹುಲಿ, ಸಿಂಹಗಳು ಸಂರಕ್ಷಿತ ಅರಣ್ಯದಲ್ಲಿ ತಿರುಗಾಡಲಿ ಎಂದಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಮಹದಾಯಿ ವಿಷಯ ಪ್ರಸ್ತಾಪ ಮಾಡಿ ಪ್ರಧಾನಿ ಗಮನಕ್ಕೆ ತರುತ್ತೇನೆ ಎಂದು ಹೇಳಬೇಕಿತ್ತು. ಆದರೆ, ಮಹದಾಯಿ ವಿಷಯವನ್ನೇ ಪ್ರಸ್ತಾಪ ಮಾಡಿಲ್ಲ. ಪ್ರತಿಬಾರಿ ರಾಜ್ಯಕ್ಕೆ ಬಂದಾಗ ಅದೇ ಭಾಷಣ ಮಾಡುತ್ತಿದ್ದಾರೆ. ಹೀಗಾಗಿ ಅವರು ಇಲ್ಲಿ ಬಂದು ಭಾಷಣ ಮಾಡುವುದು ಬೇಡ ಅವರ ಭಾಷಣದ ರೆಕಾರ್ಡಿಂಗ್‌ ಹಾಕಲಿ ಎಂದು ದಿನೇಶ್‌ ಗುಂಡೂರಾವ್‌ ಅಣಕವಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next