Advertisement

ರಾಜ್ಯದಲ್ಲಿ ಮೋದಿ ಸ್ಪರ್ಧೆ ಸುಳ್ಳು;ರಾಹುಲ್‌ಗೆ ಸೋಲು ಖಚಿತ:ಬಿಎಸ್‌ವೈ

11:48 AM Aug 14, 2018 | Team Udayavani |

ಹುಬ್ಬಳ್ಳಿ: ಯಾವುದೇ ರಾಜ್ಯದಲ್ಲಿ ಚುನಾವಣೆಗೆ ನಿಂತರೂ ತಾನು ಗೆಲ್ಲಲಾರೆ ಎಂದು ತಿಳಿದ ರಾಹುಲ್‌ ಗಾಂಧಿ ಅವರು ಬೀದರ್‌ನಿಂದ ಸ್ಪರ್ಧಿಸಲು ಮುಂದಾಗಿದ್ದಾರೆ.ಕರ್ನಾಟಕದ ಜನತೆ ಅವರನ್ನು ತಿರಸ್ಕರಿಸುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. 

Advertisement

ಮಂಗಳವಾರ ಬಿಜೆಪಿ ನಾಯಕರೊಂದಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ರಾಹುಲ್‌ ವಿರುದ್ಧ ಕಿಡಿ ಕಾರಿದರು. ಕಾಂಗ್ರೆಸ್‌ ಪಕ್ಷ ಮುಳುಗುತ್ತಿದೆ ಎಂದು ಅವರೇ ಒಪ್ಪಿಕೊಂಡಿದ್ದಾರೆ.ಅವರನ್ನು ಕಾಂಗ್ರೆಸ್‌ ಮುಖಂಡರು ಮಾದರಿ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಲೇವಡಿ ಮಾಡಿದರು. 

ದೇವೇಗೌಡರಿಗೆ ಸವಾಲು
ಲಿಂಗಾಯತ ಮುಖ್ಯಮಂತ್ರಿಗಳ ಕೊಡುಗೆ ಪ್ರಶ್ನಿಸಿರುವ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಮುಖ್ಯಮಂತ್ರಿಯಾಗಿದ್ದಾಗ ಉತ್ತರ ಕರ್ನಾಟಕ್ಕೆ ನೀಡಿದ ಕೊಡುಗೆಗಳ ಬಗ್ಗೆ  ಹೇಳಲಿ. ಕುಮಾರಸ್ವಾಮಿ ಅವರು ಉತ್ತರ ಕರ್ನಾಟಕವನ್ನು ಸಂಪೂರ್ಣ ವಾಗಿ ಮರೆತಿದ್ದಾರೆ ಎಂದರು. 

ಮೋದಿ ಸ್ಪರ್ಧೆ ಸುಳ್ಳು 
ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಿಂದ ಸ್ಪರ್ಧಿಸುತ್ತಾರೆ ಎನ್ನುವುದರಲ್ಲಿ ಸತ್ಯಾಂಶವಿಲ್ಲ ಎಂದರು. 

ಪ್ರಹ್ಲಾದ್‌ ಜೋಷಿ ಕಿಡಿ 
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಪ್ರಹ್ಲಾದ್‌ ಜೋಷಿ  ರಾಹುಲ್‌ ಅವರ ರಾಫೆಲ್‌ ಡೀಲ್‌ ಕುರಿತ ಆರೋಪ ಬಾಲಿಷ ,  ಮೂರ್ಖತನದಿಂದ ಕೂಡಿದೆ. ಅವರು ಮಾನಸಿಕ ಸ್ಥಿಮಿತವನ್ನೇ ಕಳೆದುಕೊಂಡಿದ್ದಾರೆ ಎಂದು ಕಿಡಿ ಕಾರಿದರು. 

Advertisement
Advertisement

Udayavani is now on Telegram. Click here to join our channel and stay updated with the latest news.

Next