Advertisement

ಮೋದಿ ಮತ್ತೂಮ್ಮೆ ಪ್ರಧಾನಿಯಾಗದಂತೆ ಷಡ್ಯಂತ್ರ: ಮಟ್ಟಾರು

12:30 AM Feb 10, 2019 | Team Udayavani |

ಕಾರ್ಕಳ : ಅಟಲ್‌ ಬಿಹಾರಿ ವಾಜಪೇಯಿ ಬಳಿಕ ಭಾರತಕ್ಕೆ ಹೊಸ ಚೈತನ್ಯ ತುಂಬಿದ ಪ್ರಧಾನಿ ನರೇಂದ್ರ ಮೋದಿ. ಬಲಿಷ್ಠ ಭಾರತದ ನಿರ್ಮಾಣಕ್ಕಾಗಿ ಮೋದಿಯವರನ್ನು ಮತ್ತೂಮ್ಮೆ ಪ್ರಧಾನಿ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಹೇಳಿದರು.

Advertisement

ಮೋದಿ ಮತ್ತೂಮ್ಮೆ ಪ್ರಧಾನಿಯಾಗ ಬಾರದೆಂದು ಪಾಕಿಸ್ಥಾನ, ಚೀನಾ ದೇಶಗಳು ಷಡ್ಯಂತ್ರ ರೂಪಿಸುತ್ತಿವೆ. ಸರ್ಜಿಕಲ್‌ ಸ್ಟ್ರೈಕ್‌ ಮೂಲಕ ಪಾಕಿಸ್ಥಾನವನ್ನು ಎದ್ದು ನಿಲ್ಲದಂತೆ ಮಾಡಿದ ಮೋದಿ ಮತ್ತೂಮ್ಮೆ ಪ್ರಧಾನಿ ಯಾಗಬೇಕು. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದಿಂದ ಸುನಿಲ್‌ ಕುಮಾರ್‌ ಅವರು 42 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 62 ಸಾವಿರ ಮತಗಳ ಮುನ್ನಡೆಯ ಸಾಧನೆ ಈ ಕ್ಷೇತ್ರದಿಂದಾಗಬೇಕು. ಈ ನಿಟ್ಟಿನಲ್ಲಿ ಪ್ರತಿಯೊಂದು ಬೂತ್‌ನಲ್ಲೂ ಬಿಜೆಪಿ ಹೆಚ್ಚು ಮತ ಪಡೆಯುವಲ್ಲಿ ನಾವೆಲ್ಲರೂ ಶ್ರಮಿಸಬೇಕೆಂದರು.

ಬಿಜೆಪಿ ಹಿರಿಯ ಮುಖಂಡ ಬೋಳ ಪ್ರಭಾಕರ ಕಾಮತ್‌ ಅಧ್ಯಕ್ಷತೆ ವಹಿಸಿದ್ದರು. ಶಾಸಕ ವಿ. ಸುನಿಲ್‌ ಕುಮಾರ್‌, ವಿಧಾನ ಪರಿಷತ್‌ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ರಾಷ್ಟ್ರೀಯ ಪರಿಷತ್‌ ಸದಸ್ಯ ಎಂ.ಕೆ. ವಿಜಯ ಕುಮಾರ್‌, ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್‌ ಶೆಟ್ಟಿ ಕುತ್ಯಾರು, ರಾಷ್ಟ್ರೀಯ ಪರಿಷತ್‌ ಸದಸ್ಯೆ ಹಾಗೂ ಜಿ.ಪಂ. ಸದಸ್ಯೆ ರೇಷ್ಮಾ ಉದಯ ಶೆಟ್ಟಿ, ಸಂಚಾಲಕ ಗುರುಪ್ರಸಾದ್‌ ಶೆಟ್ಟಿ, ರೈತ ಮೋರ್ಚಾದ ಜಿಲ್ಲಾಧ್ಯಕ್ಷ ಸತೀಶ ಶೆಟ್ಟಿ, ಜಿಲ್ಲಾ ಅಲ್ಪ ಸಂಖ್ಯಾಕರ ಮೋರ್ಚಾದ ಜಿಲ್ಲಾಧ್ಯಕ್ಷ ಸೋಜನ್‌ ಪಿ. ಜೇಮ್ಸ್‌, ಕಾರ್ಕಳ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವೀಂದ್ರ ಮಡಿವಾಳ, ಮಹಾವೀರ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.
ಸಾಣೂರು ನರಸಿಂಹ ಕಾಮತ್‌ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next