Advertisement

Narendra Modi: ಭ್ರಷ್ಟಾಚಾರದ ವಿರುದ್ಧ ಕ್ರಮ ನಿಲ್ಲದು: ಪ್ರಧಾನಿ ಮೋದಿ ಎಚ್ಚರಿಕೆ

09:00 PM Apr 03, 2024 | Team Udayavani |

ಕೋಲ್ಕತ್ತಾ/ಲಕ್ನೋ: ಭ್ರಷ್ಟಾಚಾರಿಗಳು ಒಂದೋ ಜಾಮೀನು ಪಡೆಯಬೇಕು ಇಲ್ಲದಿದ್ದರೆ ಜೈಲು ಸೇರಬೇಕು ಎಂದು ಪ್ರದಾನಿ ನರೇಂದ್ರ ಮೋದಿ ಲೇವಡಿ ಮಾಡಿದ್ದಾರೆ. ನಮೋ ಆ್ಯಪ್‌ ಮೂಲಕ ಪಶ್ಚಿಮ ಬಂಗಾಳದ ಬಿಜೆಪಿ ಕಾರ್ಯಕರ್ತರ ಜತೆಗೆ ಅವರು ಮಾತನಾಡಿದರು. ಇದರ ಜತೆಗೆ ಭ್ರಷ್ಟಾಚಾರದಲ್ಲಿ ತೊಡಗಿರುವವರ ವಿರುದ್ಧ ತಮ್ಮ ಹೋರಾಟ ನಿರಂತರ ಎಂದು ಸಾರಿದ್ದಾರೆ.

Advertisement

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಕಾರ್ಯರ್ತರು ದಾಳಿ ನಡೆಸುತ್ತಿದ್ದರೂ, ಅದನ್ನು ಎದುರಿಸಿ ನಿಲ್ಲುತ್ತಿರುವುದು ಶ್ಲಾಘನೀಯ ಎಂದರು. ಭ್ರಷ್ಟರು ಮೋದಿಯನ್ನು ನಿಂದಿಸುವುಕ್ಕಾಗಿಯೇ ಒಕ್ಕೂಟ ಮಾಡಿಕೊಂಡಿದ್ದಾರೆ. ಆದರೆ, ಅಂಥವರ ವಿರುದ್ಧ ಕೈಗೊಳ್ಳುವ ಕ್ರಮಗಳು ನಿಲ್ಲಲಾರವು ಎಂದರು.

ಇದಕ್ಕೂ ಮೊದಲು ಉತ್ತರ ಪ್ರದೇಶದ 10 ಕ್ಷೇತ್ರಗಳ ಬಿಜೆಪಿ ಕಾರ್ಯಕರ್ತರ ಜತೆಗೆ ಮಾತನಾಡಿದ್ದ ಪ್ರಧಾನಿ “ಪಕ್ಷದ ಕಾರ್ಯಕರ್ತರ ಉತ್ಸಾಹ ಕಂಡು ಪ್ರತಿಪಕ್ಷಗಳ ನಾಯಕರು ಭೀತಿಗೊಂಡಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವಂತೆ ಮಾಡಬೇಕಾಗಿದೆ’ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next