Advertisement

ಮೋದಿ ಅವರ ಅಂತಹ ಭಾಷಣ ಕೇಳುವ ಅಗತ್ಯವಿಲ್ಲ, ಸಿಎಂ ಸಿದ್ದರಾಮಯ್ಯ!

10:41 AM Sep 11, 2017 | Team Udayavani |

ಬೆಂಗಳೂರು: ಸ್ವಾಮಿ ವಿವೇಕಾನಂದರ ಶಿಕಾಗೋ ಭಾಷಣಕ್ಕೆ 125ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವನ್ನು ಕಡ್ಡಾಯವಾಗಿ ಟಿವಿಗಳಲ್ಲಿ ವೀಕ್ಷಿಸಬೇಕು ಎಂದು ಯುಜಿಸಿ ಎಲ್ಲಾ ವಿಶ್ವವಿದ್ಯಾಲಯಗಳಿಗೆ ಸೂಚನೆ ನೀಡಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Advertisement

ಮೈಸೂರಿನಲ್ಲಿ ಸೋಮವಾರ ಸುದ್ದಿಗಾರರು ವಿವೇಕವಾಣಿಗೆ 125 ವರ್ಷಾಚರಣೆ ಬಗ್ಗೆ ಪ್ರಧಾನಿ ಮೋದಿ ಅವರ ಭಾಷಣದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನರೇಂದ್ರ ಮೋದಿ ಅವರ ಭಾಷಣ ಹಿಂದುತ್ವದ ಭಾಷಣವಾಗಿದ್ದರೆ ಅದನ್ನು ಕೇಳಬೇಕಾದ ಅಗತ್ಯವಿಲ್ಲ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವನ್ನು ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಕಡ್ಡಾಯವಾಗಿ ವೀಕ್ಷಿಸಬೇಕೆಂದು ಯುಜಿಸಿ ಸೂಚನೆ ನೀಡಿರುವ ಬಗ್ಗೆ ಮಾಧ್ಯಮಗಳಲ್ಲಿ ಓದಿ ತಿಳಿಯಿತು. ಆದರೆ ಆ ರೀತಿ ಕಡ್ಡಾಯ ಮಾಡುವುದು ಸರಿಯಲ್ಲ. ವಿವಿ ಜತೆ ಸಂಪರ್ಕಿಸಿ ಸಂಪೂರ್ಣ ಮಾಹಿತಿ ಪಡೆದುಕೊಳ್ಳುವೆ ಎಂದು ಸಿಎಂ ಅಭಿಪ್ರಾಯವ್ಯಕ್ತಪಡಿಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next